ತುಮಕೂರಿನಲ್ಲಿ ಸರಣಿ ಅಪಘಾತ: ಇಬ್ಬರ ದುರ್ಮರಣ, Dysp ಸೇರಿ 9 ಮಂದಿಗೆ ಗಾಯ

ಘಟನೆಯಲ್ಲಿ ಡಿವೈಎಸ್ಪಿ ರಾಮಕೃಷ್ಣಪ್ಪ ಸೇರಿ 9 ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಗೊಂಡವರಲ್ಲಿ ಓರ್ವ ಮಹಿಳೆಯೂ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Tumkur
ತುಮಕೂರು ಅಪಘಾತ
Updated on

ತುಮಕೂರು: ತುಮಕೂರು–ಕುಣಿಗಲ್ ರಾಜ್ಯ ಹೆದ್ದಾರಿಯ ಬಾಣಾವರ ಗೇಟ್ ಸಮೀಪದ ನಾಗವಳ್ಳಿ ಗ್ರಾಮ ಬಳಿ ನಡೆದ ಸರಣಿ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಡಿವೈಎಸ್ಪಿ ಸೇರಿ ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಯಾದವನಗರದ ರಿಯಲ್ ಎಸ್ಟೇಟ್ ಉದ್ಯಮಿ ಸುರೇಶ್ (55) ಹಾಗೂ ಅಶೋಕನಗರದ ಗುತ್ತಿಗೆದಾರ ಮುರಳಿ (60) ಎಂದು ಗುರ್ತಿಸಲಾಗಿದೆ.

ಘಟನೆಯಲ್ಲಿ ಡಿವೈಎಸ್ಪಿ ರಾಮಕೃಷ್ಣಪ್ಪ ಸೇರಿ 9 ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಗೊಂಡವರಲ್ಲಿ ಓರ್ವ ಮಹಿಳೆಯೂ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಗಮಂಗಲ ತಾಲೂಕು ಆದಿಚುಂಚನಗಿರಿ ಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಚಿತ್ತದುರ್ಗದಿಂದ ಮೈಸೂರು ಕಡೆ ತೆರಳುತ್ತಿದ್ದ ಕಾರೊಂದು ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡಲು ಯತ್ನಿಸಿದಾಗ, ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಹೆಬ್ಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Tumkur
ವಿಜಯಪುರ: ಖಾಸಗಿ ತರಬೇತಿ ವಿಮಾನ ಅಪಘಾತ; ಪ್ರಾಣಾಪಾಯದಿಂದ ಇಬ್ಬರು ಪಾರು! Video

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com