ದ. ಕನ್ನಡದಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

ಕೋಮು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಹಲವು ಕ್ರಮಗಳ ನಂತರ ಪರಿಸ್ಥಿತಿ ಸುಧಾರಿಸಿದೆ. ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದು ಸರಿಯಿದೆ. ಪರಿಸ್ಥಿತಿ ಸುಧಾರಿಸಿದರೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚು ಜನ ಬರುತ್ತಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
Dinesh GunduRao
ದಿನೇಶ್ ಗುಂಡೂರಾವ್
Updated on

ಬೆಳಗಾವಿ: ಕೋಮುವಾದದ ಕಾರಣ ಕರಾವಳಿಯಲ್ಲಿ ಐಟಿ-ಬಿಟಿ ಕಂಪನಿಗಳು ಬಂಡವಾಳ ಹಾಕಲು ಹೆದರುತ್ತಿವೆ ಎಂಬ ಪ್ರಿಯಾಂಕ್ ಖರ್ಗೆ ಅವರ ಅಭಿಪ್ರಾಯವನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋಮು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಹಲವು ಕ್ರಮಗಳ ನಂತರ ಪರಿಸ್ಥಿತಿ ಸುಧಾರಿಸಿದೆ. ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದು ಸರಿಯಿದೆ. ಪರಿಸ್ಥಿತಿ ಸುಧಾರಿಸಿದರೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚು ಜನ ಬರುತ್ತಾರೆ ಎಂದರು.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುವಾದ ಪರಿಸ್ಥಿತಿ ಕಾರಣ ಹೂಡಿಕೆಗೆ ಅಡ್ಡಿಯಾಗಿದೆ ಎಂದು ಹೇಳಿದ್ದರು. ಅಲ್ಲಿನ ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರದಿದ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಅಲ್ಲಿ ಶಾಂತಿಯುತ ವಾತಾವರಣವಿದೆ. ಜಿಲ್ಲೆಯಲ್ಲಿ ಹೆಚ್ಚಿನ ಹೂಡಿಕೆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.

ನಮ್ಮ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತಿದೆ. ಯಾರ ಪರವಾಗಿಯೂ ಇಲ್ಲ, ಯಾರ ವಿರುದ್ಧವೂ ಇಲ್ಲ. ಯಾರೇ ಕಾನೂನು ಉಲ್ಲಂಘಿಸಿದರೂ ಕ್ರಮ ಜರುಗಿಸಲಾಗುವುದು. ಹೀಗಾಗಿ ಹಲವು ಸುಧಾರಣೆಗಳು ಆಗಿವೆ. ಪ್ರವಾಸೋದ್ಯಮಕ್ಕೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರಾವಳಿ ಕರ್ನಾಟಕಕ್ಕೆ ಭೇಟಿ ನೀಡಿ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿದ್ದರು. ಮಂಗಳೂರಿನಲ್ಲಿ ಫೈವ್ ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

"ಮಂಗಳೂರಿನಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಸಾಕಷ್ಟು ಅವಕಾಶಗಳಿವೆ ಆದರೆ ಕೋಮು ವಾತಾವರಣದಿಂದ ಈ ಪ್ರದೇಶವು ಹಿಂದುಳಿದಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದೇವೆ. ಕೆಲವು ಸಂಘಟನೆಗಳು ದ್ವೇಷ ಭಾಷಣಗಳ ಮೂಲಕ ವಾತಾವರಣವನ್ನು ಹಾಳು ಮಾಡುತ್ತಿವೆ ಎಂದು ಆರೋಪಿಸಿದ ರಾವ್, ತಮ್ಮ ಮಿತಿಯಲ್ಲಿ ಇರಲು ಅಂತಹ ಸಂಘಟನೆಗಳ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

Dinesh GunduRao
RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ನಾಯಕತ್ವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ವದಂತಿಗಳನ್ನು ತಳ್ಳಿಹಾಕಿದ ಸಚಿವರು, ಪಕ್ಷವು ಒಗ್ಗಟ್ಟಾಗಿದೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಅಥವಾ ಎಲ್ಲಿಯೂ ಭಿನ್ನಾಭಿಪ್ರಾಯಗಳಿಲ್ಲ. ಹಾಗೆಯೇ ಪಕ್ಷದಲ್ಲಿಯೂ ಯಾವುದೇ ಗೊಂದಲವಿಲ್ಲ ಎಂದರು. ಕೆಲವು ಕಾಂಗ್ರೆಸ್ ಶಾಸಕರು ರೆಸಾರ್ಟ್‌ ಕಾಯ್ದಿರಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾವ್, ಶಾಸಕರಿಗೆ ರಜೆಗೆ ಅವಕಾಶವಿಲ್ಲವೇ ಎಂದು ಕೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com