ಕರ್ನಾಟಕದ ಯಾವ ಶಾಸಕನಿಗೂ ಕ್ಷೇತ್ರದ ಅಭಿವೃದ್ಧಿಯನ್ನು ಸೋಮಣ್ಣನ ತರ ಮಾಡೋಕೆ ಸಾಧ್ಯವಿಲ್ಲ: ಸಚಿವ ಜಮೀರ್ ಪ್ರಶಂಸೆ

ಬೆಂಗಳೂರಿನ ವಿಜಯನಗರ-ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿ ನೂತನ ರಸ್ತೆ ಮೇಲ್ಸೇತುವೆಯನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಇಂದು ಲೋಕಾರ್ಪಣೆಗೊಳಿಸಿದರು. ಈ ರಸ್ತೆ ಮೇಲ್ಸೇತುವೆ ಈ ಭಾಗದ ಜನರ ಬಹುದಿನದ ಬೇಡಿಕೆಯಾಗಿತ್ತು.
Zameer Ahmad Khan-Somanna
ಜಮೀರ್ ಅಹ್ಮದ್ ಖಾನ್-ಸೋಮಣ್ಣ
Updated on

ಬೆಂಗಳೂರು: ಬೆಂಗಳೂರಿನ ವಿಜಯನಗರ-ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿ ನೂತನ ರಸ್ತೆ ಮೇಲ್ಸೇತುವೆಯನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಇಂದು ಲೋಕಾರ್ಪಣೆಗೊಳಿಸಿದರು. ಈ ರಸ್ತೆ ಮೇಲ್ಸೇತುವೆ ಈ ಭಾಗದ ಜನರ ಬಹುದಿನದ ಬೇಡಿಕೆಯಾಗಿತ್ತು. ನೂತನ ಮೇಲ್ಸೇತುವೆಯು ವಿಜಯನಗರ ಹಾಗೂ ಪಾದರಾಯನಪುರದ ಜನತೆಗೆ ಸಹಕಾರಿಯಾಗಲಿದೆ ಎಂದು ಸಚಿವ ಸೋಮಣ್ಣ ತಿಳಿಸಿದರು.

ಇದೇ ವೇಳೆ ಮಾತನಾಡಿದ ರಾಜ್ಯ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ರಾಜ್ಯದಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಸೋಮಣ್ಣ ಮಾಡುವ ಹಾಗೆ ಯಾರು ಮಾಡೋಕೆ ಸಾಧ್ಯವಿಲ್ಲ ಎಂದು ಸೋಮಣ್ಣರನ್ನು ಕಂಡಾಡಿದರು. ರಾಜ್ಯದಲ್ಲಿನ 220 ಶಾಸಕರು ಸಹ ಸೋಮಣ್ಣ ರೀತಿ ಕ್ಷೇತ್ರದ ಅಭಿವೃದ್ಥಿಯನ್ನು ಮಾಡಲು ಸಾಧ್ಯವಿಲ್ಲ ಎಂದರು. ಬಡವರ ಕೆಲಸ ಅಂದರೆ ದೇವರ ಕೆಲಸ ಅಂತ ಭಾವಿಸಿ ಸೋಮಣ್ಣ ಕೆಲಸ ಮಾಡುತ್ತಾರೆ. ನಾನು ಮೊದಲ ಸಲ ಶಾಸಕನಾದಾಗ ನನಗೆ ನನ್ನ ರಾಜಕೀಯ ಸ್ನೇಹಿತರು ಕ್ಷೇತ್ರದ ಕೆಲಸವನ್ನು ಯಾವ ರೀತಿ ಮಾಡಬೇಕು ಅಂತ ಕಲಿಯಬೇಕಾದರೆ ಸೋಮಣ್ಣನ ಕ್ಷೇತ್ರ ವಿಜಯನಗರವನ್ನು ನೋಡಿ ಎಂದು ನನಗೆ ಸಲಹೆ ನೀಡಿದ್ದರು ಎಂದು ಜಮೀರ್ ಹೇಳಿದ್ದಾರೆ.

Zameer Ahmad Khan-Somanna
ಕಟ್ಟಾ ಕಾಂಗ್ರೆಸ್ಸಿಗರೆಲ್ಲರೂ ನಿಯತ್ತಿನ ನಾಯಿಗಳು, ಬೀದಿ ನಾಯಿಗಳಲ್ಲ: ಮಹಾದೇವಪ್ಪಗೆ ಡಿ.ಕೆ ಸುರೇಶ್ ತಿರುಗೇಟು!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com