KAS ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಅಪಪ್ರಚಾರ ಆರೋಪ: ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ

ಹಿರಿಯ ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಮೈಸೂರು ನಿವಾಸಿ ಕೃಷ್ಣ ಅವರನ್ನು ಕೇಂದ್ರ ಅಪರಾಧ ವಿಭಾಗ ವಶಕ್ಕೆ ಪಡೆದಿದೆ.
Snehamayi Krishna
ಸ್ನೇಹಮಯಿ ಕೃಷ್ಣ
Updated on

ಬೆಂಗಳೂರು: ಹಿರಿಯ ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಮೈಸೂರು ನಿವಾಸಿ ಕೃಷ್ಣ ಅವರನ್ನು ಕೇಂದ್ರ ಅಪರಾಧ ವಿಭಾಗ ವಶಕ್ಕೆ ಪಡೆದಿದೆ.

ಕರ್ನಾಟಕ ಆಡಳಿತ ಸೇವೆಯ (KAS) ಹಿರಿಯ ಅಧಿಕಾರಿ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (Muda) ಮಾಜಿ ಆಯುಕ್ತ ಡಿ ಬಿ ನಟೇಶ್ ದೂರು ಸಲ್ಲಿಸಿದ್ದರು. ಫೆಬ್ರವರಿ 18ರಂದು ಬೆಂಗಳೂರು ನಗರ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿರುವ ಸಿಸಿಬಿ ಪೊಲೀಸರು, ಸ್ನೇಹಮಯಿ ಕೃಷ್ಣ ಅವರು ನಟೇಶ್ ಅವರ ಫೋಟೋಗಳನ್ನು ಬಳಸಿಕೊಂಡು ನಕಲಿ ದಾಖಲೆಗಳು ಮತ್ತು ಆಡಿಯೋ ಕ್ಲಿಪ್ ಅನ್ನು ರಚಿಸಿ ತನ್ನ ಫೇಸ್‌ಬುಕ್ ಖಾತೆಯಲ್ಲಿ ಅಪ್‌ಲೋಡ್ ಮಾಡಿ, ಅಧಿಕಾರಿಯನ್ನು ಗುರಿಯಾಗಿಸಿಕೊಂಡು ಮಾನಹಾನಿಕರ ಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ತನಿಖೆಯ ಸಮಯದಲ್ಲಿ ದೂರುದಾರರು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲಾಯಿತು. ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಲಾದ ಆಡಿಯೊ ಕ್ಲಿಪ್ ಅನ್ನು ಪರಿಶೀಲಿಸಲಾಯಿತು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

Snehamayi Krishna
ಮುಂಬಡ್ತಿಗೆ ಕೋಟ್ಯಾಂತರ ರೂ. ಲಂಚ: MUDA ಮಾಜಿ ಆಯುಕ್ತರ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸ್ನೇಹಮಯಿ ಕೃಷ್ಣ..!

ನ್ಯಾಯಾಲಯ ಹೊರಡಿಸಿದ ಸರ್ಚ್ ವಾರಂಟ್‌ನ ನಂತರ, ಪೊಲೀಸರು ಆರೋಪಿಯ ನಿವಾಸದಲ್ಲಿ ಶೋಧ ನಡೆಸಿ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com