'ರಾಜ್ಯದ ಶೇ.30ರಷ್ಟು ಶಾಸಕರು ಭ್ರಷ್ಟರು, ಮುಖ್ಯಮಂತ್ರಿ ಕೇಳಿದರೆ ಅವರ ಪಟ್ಟಿಯನ್ನು ನೀಡಲು ನಾನು ಸಿದ್ಧ': ಹೀಗೆಂದು ಹೇಳಿದ್ದು ಯಾರು?

ಚಿತ್ರದುರ್ಗದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್, ರಾಜ್ಯದಾದ್ಯಂತ ಗುತ್ತಿಗೆದಾರರಿಗೆ ಪಾವತಿಸಬೇಕಿರುವ 37,000 ಕೋಟಿ ರೂಪಾಯಿ ಬಾಕಿ ಇದೆ ಎಂದು ಹೇಳಿ, ತಕ್ಷಣವೇ ಹಣ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.
Karnataka legislators
ಕರ್ನಾಟಕ ವಿಧಾನಸಭೆ
Updated on

ಚಿತ್ರದುರ್ಗ: ರಾಜ್ಯದ ಶೇಕಡಾ 30ರಷ್ಟು ಚುನಾಯಿತ ಪ್ರತಿನಿಧಿಗಳು ಭ್ರಷ್ಟರಾಗಿದ್ದಾರೆ ಎಂದು ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಅವರು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಳಿದರೆ ಭ್ರಷ್ಟರ ಹೆಸರಿನ ಪಟ್ಟಿಯನ್ನು ನೀಡಲು ಸಿದ್ಧರಾಗಿದ್ದೇವೆ ಎಂದು ಕೂಡ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್, ರಾಜ್ಯದಾದ್ಯಂತ ಗುತ್ತಿಗೆದಾರರಿಗೆ ಪಾವತಿಸಬೇಕಿರುವ 37,000 ಕೋಟಿ ರೂಪಾಯಿ ಬಾಕಿ ಇದೆ ಎಂದು ಹೇಳಿ, ತಕ್ಷಣವೇ ಹಣ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯದ 30 ಶೇಕಡಾ ಚುನಾಯಿತ ಪ್ರತಿನಿಧಿಗಳು ಭ್ರಷ್ಟರು. ಮುಖ್ಯಮಂತ್ರಿ ಕೇಳಿದರೆ ಅವರ ಹೆಸರಿನ ಪಟ್ಟಿಯನ್ನು ನೀಡಲು ನಾನು ಸಿದ್ಧನಿದ್ದೇನೆ ಎಂದು ಮಂಜುನಾಥ್ ಹೇಳಿದರು.

ಗುತ್ತಿಗೆದಾರರ ಸಂಘದ ಬಾಕಿ ಪಾವತಿ ಸಮಸ್ಯೆಯನ್ನು ಹಲವು ಸಭೆಗಳು ನಡೆದಿದ್ದರೂ ಮುಖ್ಯಮಂತ್ರಿ ಪರಿಹರಿಸಿಲ್ಲ ಎಂದು ಟೀಕಿಸಿದರು.

Karnataka legislators
ಬಿಡುಗಡೆಯಾಗದ ಬಾಕಿ ಬಿಲ್‌: ಮೂಲಸೌಕರ್ಯ ಯೋಜನೆಗಳ ಕಾಮಗಾರಿ ಸ್ಥಗಿತಗೊಳಿಸಲು ಗುತ್ತಿಗೆದಾರರ ನಿರ್ಧಾರ

ರಾಜ್ಯದ ಗುತ್ತಿಗೆದಾರರಿಗೆ 37,000 ಕೋಟಿ ರೂಪಾಯಿ ಬಾಕಿಯಿದೆ. ಇದನ್ನು ಹಿಂದಿನ ಸರ್ಕಾರ ಪಾವತಿ ಮಾಡದೆ ಬಾಕಿ ಉಳಿಸಿದೆ ಎಂದು ಸಿದ್ದರಾಮಯ್ಯ ಹೇಳಬಾರದು. ಸರ್ಕಾರ ಎಂದರೆ ಎಲ್ಲರೂ ಹೊಣೆಗಾರರು. ಮುಖ್ಯಮಂತ್ರಿ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು. ಈಗಾಗಲೇ ಅನೇಕ ಸಭೆಗಳು ನಡೆದಿವೆ. ಆದರೆ ಯಾವುದೇ ಫಲಿತಾಂಶ ಇಲ್ಲ ಎಂದು ಹೇಳಿದರು.

ಭಾರೀ ಪ್ರತಿಭಟನೆ ಎಚ್ಚರಿಕೆ ನೀಡಿದ ಮಂಜುನಾಥ್, ಮಾರ್ಚ್ 6ರಂದು ರಾಜ್ಯದ 35,000 ಗುತ್ತಿಗೆದಾರರು ತಮ್ಮ ಕುಟುಂಬ ಸದಸ್ಯರೊಂದಿಗೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಘೋಷಿಸಿದರು.

ಜಲ್ ಜೀವನ ಮಿಷನ್ (JJM) ಕಾಮಗಾರಿಗಳ ವಿಳಂಬದ ವಿಷಯದಲ್ಲಿಯೂ ಆತಂಕ ವ್ಯಕ್ತಪಡಿಸಿ, ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

“JJM ಕಾಮಗಾರಿಗಳೂ ವಿಳಂಬವಾಗುತ್ತಿವೆ. ಸರ್ಕಾರ ಕೇಂದ್ರದೊಂದಿಗೆ ಮಾತನಾಡಿ ಹಣ ಬಿಡುಗಡೆ ಮಾಡಬೇಕು ಎಂದು ಹೇಳಿದರು. ಈ ಆರೋಪಗಳು, ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಜಾತಿ, ಆಡಳಿತ, ಭ್ರಷ್ಟಾಚಾರ ಮತ್ತು ಹಣಕಾಸು ನಿರ್ವಹಣೆ, ನಾಯಕತ್ವ ಬದಲಾವಣೆ ಕುರಿತು ರಾಜಕೀಯದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಹೊರಬಿದ್ದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com