

ಬೆಂಗಳೂರು: 10 ದಿನಗಳಿಂದ ನಾಪತ್ತೆಯಾಗಿದ್ದ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ಸೋದರಳಿಯ ಅನಿರುದ್ಧ್ ರಮೇಶ್ ಕೊನೆಗೂ ಪತ್ತೆಯಾಗಿದ್ದಾರೆ.
ಅನಿರುದ್ಧ್ ದಕ್ಷಿಣ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಹನುಮಂತನಗರದಲ್ಲಿ ವಾಸವಿದ್ದರು.
ಅನಿರುದ್ಧ್ ನಾಪತ್ತೆಯಾಗಿರುವ ಬಗ್ಗೆ ಫೆ.23 ರಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಭಾಸ್ಕರ್ ರಾವ್, ಅನಿರುದ್ಧ್ ರಮೇಶ್ ಅವರ ಪತ್ತೆಗೆ ಸಾಮಾಜಿಕ ಜಾಲತಾಣಗಳ ಬಳಕೆದಾರರಿಂದ ಸಹಾಯ ಕೋರಿದ್ದರು. ಫೆಬ್ರವರಿ 17 ರಂದು ನಾಪತ್ತೆ ದೂರು ದಾಖಲಿಸಲಾಗಿತ್ತು.
ಈಗ ತಮ್ಮ ಸೋದರಳಿಯ ಪತ್ತೆಯಾಗಿರುವುದರ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಬರೆದಿರುವ ಭಾಸ್ಕರ್ ರಾವ್, ನನ್ನ ಸೋದರಳಿಯ ಅನಿರುದ್ಧ ರಮೇಶ್ ಇಂದು ಬೆಳಿಗ್ಗೆ ಸುರಕ್ಷಿತವಾಗಿ ಮನೆಗೆ ಮರಳಿದ್ದಕ್ಕಾಗಿ ಸರ್ವಶಕ್ತ ಮತ್ತು ಗುರು ರಾಘವೇಂದ್ರ ಸ್ವಾಮಿಗಳಿಗೆ ತುಂಬಾ ಕೃತಜ್ಞತೆಗಳು.
ಸುಜೀತಾ, ಐಪಿಎಸ್, ತಿಲಕ್ನಗರ ಪೊಲೀಸ್ ಠಾಣೆ ಪಿಐ ವಿಶ್ವನಾಥ್ ಮತ್ತು ಸಿಬ್ಬಂದಿಯ ನಿರಂತರ ಹುಡುಕಾಟಕ್ಕಾಗಿ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಬೆಂಗಳೂರು ಪೊಲೀಸ್ ಆಯುಕ್ತರು ಮತ್ತು ಡಿಜಿಪಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ, ಮುದ್ರಣ ಮಾಧ್ಯಮ ಮತ್ತು ಟಿವಿ ಮಾಧ್ಯಮದ ಸಾವಿರಾರು ಸ್ನೇಹಿತರಿಗೆ ನನ್ನ ಧನ್ಯವಾದಗಳು. ನಮ್ಮ ಸಂಬಂಧಿಕರು ಮತ್ತು ಸ್ನೇಹಿತರು ತಮ್ಮ ವ್ಯಾಪ್ತಿಯನ್ನು ತಲುಪಿದ್ದಾರೆ.
ಅನಿರುದ್ಧ ಚೆನ್ನಾಗಿದ್ದಾರೆ, ಅವರು ಉನ್ನತ ಶಿಕ್ಷಣ ಪಡೆದಿದ್ದಾರೆ ಮತ್ತು ಇಷ್ಟು ದಿನ ಸ್ವಯಂ ಅನ್ವೇಷಣೆಯ ಏಕಾಂಗಿ ಪ್ರವಾಸದಲ್ಲಿದ್ದರು ಎಂದು ಹೇಳಿದ್ದಾರೆ.
Advertisement