ಹಾವೇರಿ: ಕುಸಿದ ಬೃಹತ್ ಪೆಂಡಾಲ್‌; ಸತೀಶ್ ಜಾರಕಿಹೊಳಿ ಸ್ವಲ್ಪದರಲ್ಲೇ ಪಾರು! Video

ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕಾಗಿ ಈ ಬೃಹತ್ ಪೆಂಡಾಲ್ ಹಾಕಲಾಗಿತ್ತು.
Pandal collapse due to heavy gusty winds in Haveri
ಸುಂಟರಗಾಳಿಗೆ ಕುಸಿದ ಬೃಹತ್ ಪೆಂಡಾಲ್‌
Updated on

ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ಏಕಾಏಕಿ ಜೋರಾಗಿ ಬೀಸಿದ ಸುಂಟರಗಾಳಿಗೆ ಬೃಹತ್ ಪೆಂಡಾಲ್​​ ಕುಸಿದು ಬಿದ್ದಿದ್ದು, ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶನಿವಾರ ನಡೆದಿದೆ.

ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕಾಗಿ ಈ ಬೃಹತ್ ಪೆಂಡಾಲ್ ಹಾಕಲಾಗಿತ್ತು. ಸಚಿವ ಸತೀಶ್ ಜಾರಕಿಹೊಳಿ ಅವರು ಕಾರ್ಯಕ್ರಮ ಮುಗಿಸಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಸುಂಟರಗಾಳಿಗೆ ಪೆಂಡಾಲ್ ಹಾರಿ ಹೋಗಿದೆ.

ಕಾರ್ಯಕ್ರಮದಲ್ಲಿ ನೂರಾರು ಜನ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿಯುತ್ತಿದ್ದಂತೆ ಜನ ಹೊರ ಬಂದಿದ್ದರಿಂದ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಕಾರ್ಯಕ್ರಮ ನಡೆಯುವಾಗಲೇ ಕುಸಿದಿದ್ದರೆ ಹಲವು ಮಂದಿಗೆ ಗಾಯವಾಗುವ ಸಾಧ್ಯತೆ ಇತ್ತು.

Pandal collapse due to heavy gusty winds in Haveri
ಸರ್ಕಾರದ ಕೆಲಸದ ವೇಳೆ ದೆಹಲಿ ಭೇಟಿ ಸಾಮಾನ್ಯ, ಮಹತ್ವ ನೀಡುವ ಅಗತ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಈ ಘಟನೆಯಿಂದ ಕ್ಷಣ ಕಾಲ ವಿಚಲಿತರಾದ ಸತೀಶ್ ಜಾರಕಿಹೊಳಿ ಅವರು, ಧೂಳು ಮಿಶ್ರಿತ ಸುಂಟರಗಾಳಿಗೆ ಪೆಂಡಾಲ್ ಕುಸಿದು ಬಿದ್ದಿದೆ. ಸುಂಟರಗಾಳಿಯಿಂದ ಏನೋ ಆಗಿಲ್ಲ ಎಂದು ಹೇಳಿ ಮುಂದಿನ ಕಾರ್ಯಕ್ರಮಕ್ಕೆ ತೆರಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com