

ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆ ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಸಂಕೋಲ್ ಅವರ ಮಕ್ಕಳಿಬ್ಬರು ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ಮನನೊಂದ ಸಂಕೋಲ್ ತಮ್ಮ ಕಾರಿನಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗನೂರು ಸಮೀಪದ ತೋಟದಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Advertisement