'ಮನ್ರೇಗಾ' ಭ್ರಷ್ಟಾಚಾರ ತಿಳಿಯಲು ಕೇಂದ್ರ ಸರ್ಕಾರಕ್ಕೆ 11 ವರ್ಷ ಬೇಕಾಯಿತೇ: ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಪ್ರಶ್ನೆ

ಯೋಜನೆಯಲ್ಲಿ ಅವ್ಯವಹಾರ ನಡೆಯುತ್ತಿದ್ದರೆ ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಅವಕಾಶವಿತ್ತು. ಇದನ್ನು ಬಿಟ್ಟು ಯೋಜನೆಯ ಮೂಲಸ್ವರೂಪವನ್ನೇ ಬದಲಿಸಿದೆ ಎಂದು ಹರಿಹಾಯ್ದರು.
Prabha mallikarjun
ಪ್ರಭಾ ಮಲ್ಲಿಕಾರ್ಜುನ್‌
Updated on

ದಾವಣಗೆರೆ: ಮನ್ರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರಕ್ಕೆ 11 ವರ್ಷ ಬೇಕಾಯಿತೇ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಪ್ರಶ್ನಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆಯಲ್ಲಿ ಅವ್ಯವಹಾರ ನಡೆಯುತ್ತಿದ್ದರೆ ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಅವಕಾಶವಿತ್ತು. ಇದನ್ನು ಬಿಟ್ಟು ಯೋಜನೆಯ ಮೂಲಸ್ವರೂಪವನ್ನೇ ಬದಲಿಸಿದೆ ಎಂದು ಹರಿಹಾಯ್ದರು.

ಮನ್ರೇಗಾ ಯೋಜನೆಯ ಸ್ವರೂಪ ಬದಲಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ರಾಜ್ಯದಲ್ಲಿ ಕಾಂಗ್ರೆಸ್‌ ಹೋರಾಟ ಕೈಗೆತ್ತಿಕೊಂಡಿದೆ. ಪಕ್ಷದ ಎಲ್ಲ ಕಾರ್ಯಕರ್ತರು, ಮನರೇಗಾ ಕಾರ್ಮಿಕರು ಈ ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಗ್ರಾಮೀಣ ಪ್ರದೇಶದ ಬಡವರಿಗೆ ಕೂಲಿ ನೀಡಿ ಆರ್ಥಿಕ ಸಬಲೀಕರಣಕ್ಕೆ ಯೋಜನೆ ಒತ್ತು ನೀಡಿತ್ತು. ಕೇಂದ್ರ ಮತ್ತು ರಾಜ್ಯದ ಅನುದಾನದ ಪಾಲನ್ನು 60:40ಕ್ಕೆ ಬದಲಾವಣೆ ಮಾಡಿರುವುದು ಕೂಡ ಆಕ್ಷೇಪಾರ್ಹ. ಯೋಜನೆಯಿಂದ ಮಹಾತ್ಮ ಗಾಂಧೀಜಿ ಹೆಸರನ್ನು ಉದ್ದೇಶ ಪೂರ್ವಕವಾಗಿ ಕೈಬಿಡಲಾಗಿದೆ. ಕೇಂದ್ರ ಸರ್ಕಾರದ ಈ ಹುನ್ನಾರವನ್ನು ವಿರೋಧಿಸಿ ರಾಜ್ಯದಾದ್ಯಂತ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.

Prabha mallikarjun
ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಪ್ರಾಯೋಜಕತ್ವದಲ್ಲಿ 9 SSLC ಟಾಪರ್‌ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com