Actor Shiva Rajkumar carries irumudi at Bejjavalli Ayyappa temple
ನಟ ಶಿವರಾಜ್​ಕುಮಾರ್

ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ನಟ ಶಿವರಾಜ್​ಕುಮಾರ್ ದಂಪತಿ

ನಟ ಶಿವರಾಜ್​ಕುಮಾರ್ ದಂಪತಿ ಸಹ ಮಾಲೆ ಧರಿಸಿ ಇರುಮುಡಿ ಹೊತ್ತುಕೊಂಡು ದೇವರ ಸೇವೆ ಮಾಡಿದರು.
Published on

ಶಿವಮೊಗ್ಗ: ಸ್ಯಾಂಡಲ್​ವುಡ್ ಹಿರಿಯ ನಟ ಶಿವರಾಜ್​ಕುಮಾರ್ ಅವರು ಬುಧವಾರ ಅವರು ಅಯ್ಯಪ್ಪಸ್ವಾಮಿ ಭಕ್ತರಾಗಿದ್ದು, ಹಲವು ಬಾರಿ ಅವರು ಮಾಲೆ ಧರಿಸಿದ್ದಾರೆ. ಈ ವರ್ಷವೂ ಅವರು ಮಾಲೆ ಧರಿಸಿ ಇರುಮುಡಿ ಹೊತ್ತು ಅಯ್ಯಪ್ಪಸ್ವಾಮಿ ದರ್ಶನ ಪಡೆದಿದ್ದಾರೆ. ಅವರ ಪತ್ನಿ ಗೀತಾ ಕೂಡ ಸಾಥ್ ನೀಡಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಶ್ರೀಕ್ಷೇತ್ರ ಬೆಜ್ಜವಳ್ಳಿ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಮಕರ ಸಂಕ್ರಾಂತಿ ಮತ್ತು ಶ್ರೀಗಳ ಪೀಠಾರೋಹಣದ ವರ್ಧಂತ್ತೋತ್ಸವ ನಡೆಯಿತು.

ನಟ ಶಿವರಾಜ್​ಕುಮಾರ್ ದಂಪತಿ ಸಹ ಮಾಲೆ ಧರಿಸಿ ಇರುಮುಡಿ ಹೊತ್ತುಕೊಂಡು ದೇವರ ಸೇವೆ ಮಾಡಿದರು. ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಶ್ರೀ ಹರಿಹರಾತ್ಮಜ ಪೀಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಿವಣ್ಣ, ನಮ್ಮ ಕುಟುಂಬ ಅಯ್ಯಪ್ಪಸ್ವಾಮಿ ಭಕ್ತರಾಗಿದ್ದು, ಅಯ್ಯಪ್ಪಸ್ವಾಮಿ ಮಾಲಾಧಾರಿಯಾಗಿ ಬೆಜ್ಜವಳ್ಳಿಗೆ ಭೇಟಿ ನೀಡಿರುವುದು ಸಂತೋಷ ತಂದಿದೆ ಎಂದರು.

Actor Shiva Rajkumar carries irumudi at Bejjavalli Ayyappa temple
'ಯಾರ ಮನೆಯನ್ನೂ ಒಡೆಯೋಕೆ ಹೋಗಬಾರದು': ದರ್ಶನ್-ಸುದೀಪ್ ಫ್ಯಾನ್ಸ್ ವಾರ್ ಕುರಿತು ಶಿವಣ್ಣ ಖಡಕ್ ಮಾತು!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com