ಬೆಂಗಳೂರು: ವ್ಯಕ್ತಿಯೊಬ್ಬರ ಸಮಯ ಪ್ರಜ್ಞೆಯಿಂದ ಬಾಲ್ಯ ವಿವಾಹ ತಡೆದ ನಮ್ಮ 112, ಹೊಯ್ಸಳ ಸಿಬ್ಬಂದಿ!

ಗುರುವಾರ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೂಪೇನ ಅಗ್ರಹಾರದ ಕೋಡಿಚಿಕ್ಕನಹಳ್ಳಿಯಲ್ಲಿ ಬಾಲ್ಯ ವಿವಾಹ ನಡೆಸಲು ಯತ್ನಿಸುತ್ತಿರುವುದನ್ನು ಗಮನಿಸಿದ ವ್ಯಕ್ತಿ ತಕ್ಷಣವೇ ‘ನಮ್ಮ 112’ ಗೆ ಕರೆ ಮಾಡಿ ಮಾಹಿತಿ ನೀಡಿದರು.
Child Marriage
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಸಾರ್ವಜನಿಕರೊಬ್ಬರ ದೂರಿನ ಮೇರೆಗೆ ನಮ್ಮ 112 ಸಿಬ್ಬಂದಿ ಬಾಲ್ಯ ವಿವಾಹವನ್ನು ಯಶಸ್ವಿಯಾಗಿ ತಡೆದಿದ್ದಾರೆ.

ಗುರುವಾರ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೂಪೇನ ಅಗ್ರಹಾರದ ಕೋಡಿಚಿಕ್ಕನಹಳ್ಳಿಯಲ್ಲಿ ಬಾಲ್ಯ ವಿವಾಹ ನಡೆಸಲು ಯತ್ನಿಸುತ್ತಿರುವುದನ್ನು ಗಮನಿಸಿದ ವ್ಯಕ್ತಿ ತಕ್ಷಣವೇ ‘ನಮ್ಮ 112’ ಗೆ ಕರೆ ಮಾಡಿ ಮಾಹಿತಿ ನೀಡಿದರು.

ನಮ್ಮ 112 ಸಿಬ್ಬಂದಿ ಹೊಯ್ಸಳ-209 ಸಿಬ್ಬಂದಿಗೆ ಮಾಹಿತಿಯನ್ನು ರವಾನಿಸಿದರು. ಗಸ್ತು ವಾಹನದಲ್ಲಿದ್ದ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಸುರೇಶ್ ಮತ್ತು ಹೆಡ್ ಕಾನ್‌ಸ್ಟೆಬಲ್ ಉಮೇಶ್ ನಾಗಣ್ಣವರ್ ಸ್ಥಳಕ್ಕೆ ಧಾವಿಸಿ ವಿವರಗಳನ್ನು ಪರಿಶೀಲಿಸಿದ ನಂತರ ಮದುವೆ ಸಮಾರಂಭವನ್ನು ನಿಲ್ಲಿಸಿದರು.

ಪೊಲೀಸರು ಹದಿನೇಳು ವರ್ಷದ ಬಾಲಕಿ ಮತ್ತು ಹದಿನೆಂಟು ವರ್ಷದ ಬಾಲಕನನ್ನು ಗುರುತಿಸಿದರು. ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿಯಲ್ಲಿ ಕಾನೂನು ನಿಬಂಧನೆಗಳ ಬಗ್ಗೆ ಪೋಷಕರು ಮತ್ತು ಇತರ ಕುಟುಂಬ ಸದಸ್ಯರಿಗೆ ಪೊಲೀಸರು ಸಲಹೆ ನೀಡಿದರು ಮತ್ತು ಕಾನೂನು ಉಲ್ಲಂಘನೆಯ ಪರಿಣಾಮಗಳನ್ನು ವಿವರಿಸಿದರು. ಮದುವೆಯನ್ನು ಯಶಸ್ವಿಯಾಗಿ ತಡೆಯಲಾಯಿತು ಎಂದು ಪೊಲೀಸ್ ಆಯುಕ್ತರ ಕಚೇರಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Child Marriage
'ಬಾಲ್ಯ ವಿವಾಹ ತಡೆಯಲು ವಿಫಲರಾದ ಸರ್ಕಾರಿ ಸಿಬ್ಬಂದಿಗಳ ವಿರುದ್ಧ ಕ್ರಮ': ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com