ಬೈರತಿ ವಿರುದ್ಧ ಅವಹೇಳನಕಾರಿ ಹೇಳಿಕೆ: BJP ಶಾಸಕ ಸುರೇಶ್ ಕುಮಾರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, ಮನೆ ಮುಂದೆ ಪೋಸ್ಟರ್ ಅಂಟಿಸಿ ಪ್ರತಿಭಟನೆ

ಶುಕ್ರವಾರ ವಿಧಾನಸಭೆಯಲ್ಲಿ ಸುರೇಶ್ ಕುಮಾರ್ ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನಾ ಸಚಿವ ಬೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
Congress workers sticking posters at the residence of BJP MLA S Suresh Kumar at Rajajinagar in Bengaluru on Saturday.
ಪೋಸ್ಟರ್ ಅಂಟಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು
Updated on

ಬೆಂಗಳೂರು: ಸಚಿವ ಬೈರತಿ ಸುರೇಶ್ ವಿರುದ್ಧ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ನೀಡಿರುವ ಅವಹೇಳನ ಹೇಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಸುರೇಶ್ ಕುಮಾರ್ ಅವರ ನಿವಾಸಕ್ಕೆ ಪೋಸ್ಟರ್ ಅಂಟಿಸಿ ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

ರಾಜಾಜಿನಗರದಲ್ಲಿರುವ ಸುರೇಶ್‌ ಕುಮಾರ್ ಅವರ ಮನೆಯ ಮುಂದೆ ಶನಿವಾರ ಬೆಳಿಗ್ಗೆ ಸೇರಿದ್ದ ಕಾಂಗ್ರೆಸ್‌ ಕಾರ್ಯಕರ್ತರು, ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು. ಮನೆಯ ಗೋಡೆಗಳಿಗೆ ಪೋಸ್ಟರ್‌ಗಳನ್ನು ಅಂಟಿಸಿದರು.

ಶುಕ್ರವಾರ ವಿಧಾನಸಭೆಯಲ್ಲಿ ಸುರೇಶ್ ಕುಮಾರ್ ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನಾ ಸಚಿವ ಬೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಶಾಸಕ ಸುರೇಶ್ ಕುಮಾರ್ ಅವರ ಕಾರು ಚಾಲಕ ಪುನೀತ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಶಂಕರ್, ಮಂಜು, ನವೀನ್ ಮತ್ತು ಸಾಯಿ ಎಂಬ ನಾಲ್ವರನ್ನು ಬಂಧನಕ್ಕೊಳಪಡಿಸಿದ್ದಾರೆ. ನಾಲ್ವರೂ ಬಸವೇಶ್ವರನಗರದ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಗೆ ಕುರಿತು ಪ್ರತಿಕ್ರಿಯಿಸಿದ ಸುರೇಶ್ ಕುಮಾರ್ ಅವರು, ನಾನು ಬಳಸಿದ ಪದವು ಅವಹೇಳನಕಾರಿಯಾಗಿದ್ದು, ಅದನ್ನು ಸದನದ ಕಡತದಿಂದ ತೆಗೆದುಹಾಕಲಾಗಿದೆ. ಸದನದಲ್ಲೇ ಹೇಳಿಕೆ ಬಗ್ಗೆ ವಿಷಾದವನ್ನೂ ವ್ಯಕ್ತಪಡಿಸಿದ್ದೇನೆ. ಇದರೊಂದಿಗೆ ಈ ಅಧ್ಯಾಯ ಮುಕ್ತಾಯಗೊಂಡಿದೆ ಎಂದು ಹೇಳಿದ್ದಾರೆ.

Congress workers sticking posters at the residence of BJP MLA S Suresh Kumar at Rajajinagar in Bengaluru on Saturday.
ಬಂಧನ ಭೀತಿಯಿಂದ ಬೈರತಿ ಬಸವರಾಜ್‌ ಪಾರು: ಹೈಕೋರ್ಟ್ ಜಾಮೀನು ಮಂಜೂರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com