ಕಾರ್ಕಳ: ಕ್ರೂಸರ್‌-ಬಸ್ ನಡುವೆ ಭೀಕರ ಅಪಘಾತ; ಗಾಣಗಾಪುರದ ನಾಲ್ವರ ಸಾವು

ಅಪಘಾತದಲ್ಲಿ ‌ಕ್ರೂಸರ್ ವಾಹನ ನಜ್ಜುಗುಜ್ಜಾಗಿದೆ. ತಾಲ್ಲೂಕಿನ ದೇವಲಗಣಗಾಪುರದ ಕುಟುಂಬವೊಂದರ 12 ಮಂದಿ ಕ್ರೂಸರ್ ವಾಹನ ಮೂಲಕ ಉಡುಪಿ ಜಿಲ್ಲೆಗೆ ಪ್ರವಾಸಕ್ಕೆ ಹೋಗಿದ್ದರು.
Accident
ಅಪಘಾತ
Updated on

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಕ್ರೂಸರ್‌(ತೂಫಾನ್) ವಾಹನ ಹಾಗೂ ಸಾರಿಗೆ ಬಸ್‌ ನಡುವೆ ಸಂಭವಿಸದ ಭೀಕರ ಅಪಘಾತದಲ್ಲಿ ಚಾಲಕ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌.

ದೇವಲ ಗಾಣಗಾಪುರದ ಚೇತನ್ ಮಾದರ(18) ಮತ್ತು ರೋಹಿದಾಸ್ ಮಾದರ (19) ಹಾಗೂ ಮಲ್ಲಮ್ಮ (45) ಅದರಂತೆ ಚಾಲಕ ಮಾನಪ್ಪ (30) ಎಂಬವರು ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ‌ಕ್ರೂಸರ್ ವಾಹನ ನಜ್ಜುಗುಜ್ಜಾಗಿದೆ. ತಾಲ್ಲೂಕಿನ ದೇವಲಗಣಗಾಪುರದ ಕುಟುಂಬವೊಂದರ 12 ಮಂದಿ ಕ್ರೂಸರ್ ವಾಹನ ಮೂಲಕ ಉಡುಪಿ ಜಿಲ್ಲೆಗೆ ಪ್ರವಾಸಕ್ಕೆ ಹೋಗಿದ್ದರು.

ಶನಿವಾರ ಸಂಜೆ ಕಾರ್ಕಳದಿಂದ ಕ್ರೂಸರ್ ಮೂಲಕ ಉಡುಪಿಗೆ ಸಂಚರಿಸುವ ಮಧ್ಯದ ಕಾರ್ಕಳ ಹತ್ತಿರ ಬಸ್ಸಿಗೆ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ದುರ್ಘಟನೆಯಲ್ಲಿ ಇನ್ನುಳಿದ 9 ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಉಡುಪಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ‌ ದಾಖಲಿಸಲಾಗಿದೆ. ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

Accident
ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಅಪಘಾತ: ಬಸ್'ಗೆ ಡಿಕ್ಕಿಯಾಗಿ ಕಾರು ಪಲ್ಟಿ; ಸೀಟ್‌ ಬೆಲ್ಟ್‌'ನಿಂದ ಬದುಕುಳಿದ ವೃದ್ದ ದಂಪತಿ..!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com