'ಮನ್ರೇಗಾ' ಕೈಬಿಟ್ಟ ಕ್ರಮ ವಿರೋಧಿಸಿ ಕಾಂಗ್ರೆಸ್ ಲೋಕ್ ಭವನ್ ಚಲೋ: ಕೇಂದ್ರ ವಿರುದ್ಧ ವಾಗ್ದಾಳಿ; ಸಿಎಂ-ಡಿಸಿಎಂ ವಶಕ್ಕೆ ಪಡೆದು ಬಿಡುಗಡೆ

ಕೇಂದ್ರ ಸರ್ಕಾರವು ಗ್ರಾಮೀಣ ಉದ್ಯೋಗ ಖಾತರಿ ಚೌಕಟ್ಟನ್ನು ಕಿತ್ತುಹಾಕುತ್ತಿದೆ. ಪಂಚಾಯತ್‌ಗಳ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ ಎಂದು ಆರೋಪಿಸಿ ಲೋಕ ಭವನದ ಕಡೆಗೆ ತೆರಳಲು ಯತ್ನಿಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ತಡೆದರು.
CM and DCM D K Shivakumar in VB G RAM G protest
ವಿಬಿ ಜಿ ರಾಮ್ ಜಿ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್
Updated on

ಬೆಂಗಳೂರು: ಮನರೇಗಾ ಹಾಗೂ ವಿಬಿ ಜಿ ರಾಮ್ ಜಿ ಹೋರಾಟವನ್ನು ತೀವ್ರಗೊಳಿಸಲು ಕೈ ಪಡೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಇಂದು ಮಂಗಳವಾರ ರಾಜಭವನ ಚಲೋ ಹಮ್ಮಿಕೊಂಡಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ರಾಷ್ಟ್ರೀಯ ನಾಯಕರು ಈ ಹೋರಾಟಕ್ಕೆ ಸಾಥ್ ನೀಡಿದ್ದಾರೆ.

ರಾಜ್ ಭವನ ಚಲೋ ಪ್ರತಿಭಟನೆಯ ಭಾಗವಾಗಿ ಲೋಕ ಭವನದ ಕಡೆಗೆ ಮೆರವಣಿಗೆ ನಡೆಸಲು ನಿರ್ಧರಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಪಕ್ಷದ ಶಾಸಕರು ಮತ್ತು ಸಂಸದರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದರು.

MGNREGA ಬದಲಾಗಿ VB-G RAM G ತರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಪ್ರತಿಭಟನೆ ನಡೆಯಿತು.

ಕೇಂದ್ರ ಸರ್ಕಾರವು ಗ್ರಾಮೀಣ ಉದ್ಯೋಗ ಖಾತರಿ ಚೌಕಟ್ಟನ್ನು ಕಿತ್ತುಹಾಕುತ್ತಿದೆ. ಪಂಚಾಯತ್‌ಗಳ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ ಎಂದು ಆರೋಪಿಸಿ ಲೋಕ ಭವನದ ಕಡೆಗೆ ತೆರಳಲು ಯತ್ನಿಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ತಡೆದರು.

ಭಾಷಣ ಮಾಡಿದ ನಂತರ ನಾಯಕರು ಸ್ಥಳದ ಹೊರಗೆ ಪೊಲೀಸರು ನಿಯೋಜಿಸಿದ್ದ ಬಸ್ ಹತ್ತಿ ಬಂಧನಕ್ಕೆ ಒಳಗಾದರು.

ಬಂಧನಕ್ಕೆ ಮುನ್ನ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಬಿ ಜಿ ರಾಮ್ ಜಿನಲ್ಲಿರುವ ಈ 'ರಾಮ' ದಶರಥ ರಾಮ ಅಥವಾ ಸೀತಾ ರಾಮ ಅಲ್ಲ, ಇದು ರೋಜ್‌ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ಗಾಗಿ ವಿಕಸಿತ ಭಾರತ ಗ್ಯಾರಂಟಿ ಎಂದು ಸೂಚಿಸುತ್ತದೆ.

ಹಿಂದಿನ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಪರಿಚಯಿಸಿದ ಜೀವನೋಪಾಯ ಮತ್ತು ಉದ್ಯೋಗದ ಹಕ್ಕು ನರೇಗಾ ಎಂದು ಹೇಳಿದರು. ಕೇಂದ್ರವು ಅದನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ನರೇಗಾ ಯೋಜನೆ ಜನರ ಹಕ್ಕಾಗಿತ್ತು, ಆದರೆ ಇನ್ನು ಮುಂದೆ ಅಲ್ಲ. ವಿಶೇಷಚೇತನರು ಸೇರಿದಂತೆ ಸುಮಾರು ಐದು ಕೋಟಿ ಜನರು ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಪಡೆಯುತ್ತಿದ್ದಾರೆ. ಮೊದಲು ಪಂಚಾಯತ್‌ಗಳು ಯಾವ ಕೆಲಸ ಮಾಡಬೇಕೆಂದು ಕೇಂದ್ರವು ನಿರ್ಧರಿಸಲು ಬಯಸುತ್ತದೆ, ಆದರೆ ಅದನ್ನು ತೀವ್ರವಾಗಿ ಮೊಟಕುಗೊಳಿಸಲಾಗಿದೆ ಎಂದು ಆರೋಪಿಸಿದರು. ಪಂಚಾಯತ್‌ಗಳ ಪಾತ್ರವನ್ನು ತೀವ್ರವಾಗಿ ಮೊಟಕುಗೊಳಿಸಲಾಗಿದೆ ಎಂದು ಹೇಳಿದರು. ಪ್ರತಿ ಪಂಚಾಯತ್‌ಗೆ ಮೊದಲು ಸುಮಾರು ಒಂದು ಕೋಟಿ ರೂ.ಗಳನ್ನು ಪಡೆಯಲಾಗುತ್ತಿತ್ತು, ಈಗ ಅವರು ಅದರಿಂದ ವಂಚಿತರಾಗುತ್ತಾರೆ ಎಂದರು.

ವಿಬಿ-ಜಿ ರಾಮ್ ಜಿ ರದ್ದುಗೊಳಿಸುವವರೆಗೆ ಮತ್ತು ಮನ್ರೇಗಾ ಮರುಸ್ಥಾಪನೆಯಾಗುವವರೆಗೆ ನಾವು ಹೋರಾಡುತ್ತೇವೆ. ನರೇಗಾ ಮಾಡಿದಂತೆ ವಿಬಿ ಜಿ ರಾಮ್ ಜಿ ಉದ್ಯೋಗವನ್ನು ಖಾತರಿಪಡಿಸುವುದಿಲ್ಲ ಎಂದು ಅವರು ಹೇಳಿದರು.

ಗ್ರಾಮಗಳು ಅಭಿವೃದ್ಧಿ ಹೊಂದದ ಹೊರತು ರಾಷ್ಟ್ರ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದು ಗಾಂಧಿಜೀ ಹೇಳಿದರು. ಮನ್ರೇಗಾ ರದ್ದುಗೊಳಿಸುವ ಮೂಲಕ ಬಿಜೆಪಿ ಮತ್ತೊಮ್ಮೆ ಮಹಾತ್ಮ ಗಾಂಧಿಯನ್ನು ಕೊಂದಿದೆ ಎಂದು ಸಿಎಂ ಆರೋಪಿಸಿದರು. ರಾಜ್ಯಾದ್ಯಂತ ಪ್ರತಿ ಹಳ್ಳಿಯಲ್ಲೂ ಜನರು ಆಂದೋಲನ ನಡೆಸಬೇಕೆಂದು ಅವರು ಕರೆ ನೀಡಿದರು.

ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಪತ್ರವನ್ನು ಸಲ್ಲಿಕೆ.
ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಪತ್ರವನ್ನು ಸಲ್ಲಿಕೆ.

ಕರ್ನಾಟಕದ ಉಸ್ತುವಾರಿಯೂ ಆಗಿರುವ ರಂದೀಪ್ ಸಿಂಗ್ ಸುರ್ಜೇವಾಲಾ, ಕೇಂದ್ರವು ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ರದ್ದುಗೊಳಿಸಲು ಮುಂದಾಗಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಮನ್ರೇಗಾ ರದ್ದುಗೊಳಿಸಲು ಬಯಸುತ್ತಿದೆ. ಪಂಚಾಯತ್ ಕೇಂದ್ರಗಳನ್ನು 'ಮಹಾತ್ಮ ಗಾಂಧಿ ಕೇಂದ್ರ' ಎಂದು ಮರುನಾಮಕರಣ ಮಾಡುವಂತೆ ನಾನು ಕರ್ನಾಟಕ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.

ಮನ್ರೇಗಾ ರದ್ದುಗೊಳಿಸುವ ಮೂಲಕ, ಬಿಜೆಪಿ ತನಗಾಗಿ ತೊಂದರೆಯನ್ನು ಆಹ್ವಾನಿಸಿಕೊಂಡಿದೆ. ಗ್ರಾಮೀಣ ಪ್ರದೇಶದ ಜನರು ವಿಬಿ ಜಿ ರಾಮ್ ಜಿಯನ್ನು ಸ್ವೀಕರಿಸುವುದಿಲ್ಲ, ಉದ್ಯೋಗ ಖಾತರಿ ಕಾನೂನನ್ನು ರದ್ದುಗೊಳಿಸಿದ್ದಕ್ಕಾಗಿ ಅವರು ಬಿಜೆಪಿಯನ್ನು ಕ್ಷಮಿಸುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ನಂತರ, ಅವರು ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com