

ಬೆಂಗಳೂರು: ಸಾರಿಗೆ ನೌಕರರ ಮುಖಂಡ 84 ವರ್ಷ ಅನಂತ್ ಸುಬ್ಬರಾವ್ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅನಂತ್ ಸುಬ್ಬರಾವ್ ಅವರಿಗೆ ಬೆಂಗಳೂರಿನ ತಮ್ಮ ಮನೆಯಲ್ಲೇ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಬೆಂಗಳೂರಿನ ವಿಜಯನಗರದ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದ ಅನಂತ್ ಸುಬ್ಬರಾವ್ ನೇತೃತ್ವದಲ್ಲಿ ನಾಳೆ ಮುಷ್ಕರ ಹಾಗೂ ಬೆಂಗಳೂರು ಚಲೋ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದರು. ಆದರೆ ಅವರ ನಿಧನದಿಂದಾಗಿ ನಾಳೆ ನಡೆಯಬೇಕಾಗಿದ್ದ ಸಾರಿಗೆ ನೌಕರರ ಮುಷ್ಕರ ಹಾಗೂ ಬೆಂಗಳೂರು ಚಲೋವನ್ನು ಮುಂದೂಡಲಾಗಿದೆ.
Advertisement