ಸಿಜೆ ರಾಯ್ ಅವರೇ ಶೂಟ್ ಮಾಡಿಕೊಂಡ್ರಾ ಅಥವಾ ಶೂಟ್ ಮಾಡಿದ್ರಾ? ಪ್ರದೀಪ್ ಈಶ್ವರ್ ಅನುಮಾನ!

ಅಧಿಕಾರಿಗಳನ್ನು ಬಿಟ್ಟರೆ ಬೇರೆ ಯಾರು ಇರಲಿಲ್ಲ. ಅಲ್ಲದೇ ಯಾವುದೇ ಸಿಸಿಟಿವಿ ಕ್ಯಾಮರಾಗಳಲ್ಲಿ ಶೂಟೌಟ್ ದೃಶ್ಯಾವಳಿಗಳು ಸೆರೆಯಾಗಿಲ್ಲ. ಹೀಗಾಗಿ ಅನುಮಾನವಿದೆ ಎಂದ ಪ್ರದೀಪ್ ಈಶ್ವರ್.
CJ Roy,Pradeep Eshwar
ಸಿಜೆ ರಾಯ್, ಪ್ರದೀಪ್ ಈಶ್ವರ್
Updated on

ಕನಕಪುರ: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರೇ ಶೂಟ್ ಮಾಡಿಕೊಂಡ್ರಾ ಅಥವಾ ಶೂಟ್ ಮಾಡಿದ್ರಾ? ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೀಪ್ ಈಶ್ವರ್, ಐಟಿ ಅಧಿಕಾರಿಗಳ ಮೇಲೆ ಬೊಟ್ಟು ಮಾಡಿದರು. ಶೂಟೌಟ್ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ

ಅಧಿಕಾರಿಗಳನ್ನು ಬಿಟ್ಟರೆ ಬೇರೆ ಯಾರು ಇರಲಿಲ್ಲ. ಅಲ್ಲದೇ ಯಾವುದೇ ಸಿಸಿಟಿವಿ ಕ್ಯಾಮರಾಗಳಲ್ಲಿ ಶೂಟೌಟ್ ದೃಶ್ಯಾವಳಿಗಳು ಸೆರೆಯಾಗಿಲ್ಲ. ಹೀಗಾಗಿ ಸಿಜೆ ರಾಯ್ ಅವರೇ ಶೂಟ್ ಮಾಡಿಕೊಂಡ್ರಾ ಅಥವಾ ಬೇರೆ ಯಾರಾದರೂ ಶೂಟ್ ಮಾಡಿದ್ರಾ ಎಂಬುದರ ಬಗ್ಗೆ ಅನುಮಾನವಿದೆ ಎಂದರು.

ಕೇರಳ ಚುನಾವಣೆಗೆ ಬಿಜೆಪಿಯವರು ಸಿಜೆ ರಾಯ್ ಅವರಿಂದ ನೂರಾರು ಕೋಟಿ ರೂ. ದುಡ್ಡು ಕೇಳಿದ್ರು, ಈ ವಿಚಾರವಾಗಿ ಟಾರ್ಗೆಟ್ ಮಾಡಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತನಿಖೆಗೆ ಒಳಪಡಿಸಿದ್ದಾರೆ. ಈ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಪ್ರದೀಪ್ ಈಶ್ವರ್ ಒತ್ತಾಯಿಸಿದರು.

CJ Roy,Pradeep Eshwar
ಸಿಜೆ ರಾಯ್ ಸಾವು ಪ್ರಕರಣದ ತನಿಖೆಯಾಗಲಿ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ 'ಕಿರುಕುಳ' ಕಾರಣ; ಸಚಿವ ಪ್ರಿಯಾಂಕ್ ಖರ್ಗೆ

ಸಿಬಿಐ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಅದು ಬಿಜೆಪಿ ಕೈಯಲಿದೆ ಎಂದು ಪ್ರದೀಪ್ ಈಶ್ವರ್ ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com