ಆಳಂದ ಗಲಭೆ ಪ್ರಕರಣ ಸೇರಿ 52 ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಅಪರಾಧ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 321 ಅನ್ನು ರಾಜ್ಯ ಸರ್ಕಾರವು ಅನ್ವಯಿಸಿರುವುದರಲ್ಲಿ ಲೋಪವಿದೆ ಎಂದು ಹೈಕೋರ್ಟ್ ತನ್ನ ಪ್ರಾಥಮಿಕ ಅವಲೋಕನದಲ್ಲಿ ಅಭಿಪ್ರಾಯಪಟ್ಟಿದೆ.
Karnataka High Court
ಕರ್ನಾಟಕ ಹೈಕೋರ್ಟ್
Updated on

ಬೆಂಗಳೂರು: ಆಳಂದ ಗಲಭೆಗೆ ಸಂಬಂಧಿಸಿದ ಪ್ರಕರಣ ಸೇರಿದಂತೆ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಸಚಿವ ಸಂಪುಟದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ತಡೆ ನೀಡಿದೆ.

ಗಿರೀಶ್ ಭಾರದ್ವಾಜ್ vs ಕರ್ನಾಟಕ ರಾಜ್ಯ ಪ್ರಕರಣದಲ್ಲಿ ಈ ತಡೆಯಾಜ್ಞೆಯನ್ನು ನೀಡಲಾಗಿದೆ.

ಅಪರಾಧ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 321 ಅನ್ನು ರಾಜ್ಯ ಸರ್ಕಾರವು ಅನ್ವಯಿಸಿರುವುದರಲ್ಲಿ ಲೋಪವಿದೆ ಎಂದು ಹೈಕೋರ್ಟ್ ತನ್ನ ಪ್ರಾಥಮಿಕ ಅವಲೋಕನದಲ್ಲಿ ಅಭಿಪ್ರಾಯಪಟ್ಟಿದೆ.

ಆರೋಪಿಗಳ ವಿರುದ್ಧದ ಮೊಕದ್ದಮೆಗಳನ್ನು ಹಿಂಪಡೆಯಲು ಸೂಕ್ತ ಕಾನೂನು ಪ್ರಕ್ರಿಯೆಯ ಮೂಲಕವೇ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಹೈಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ಈ ನಿರ್ಧಾರವು ಉಲ್ಲಂಘಿಸಿದೆ ಎಂದು ನ್ಯಾಯಪೀಠವು ಗಮನಸೆಳೆದಿದೆ.

ಸಂಪುಟವು ಇತ್ತೀಚೆಗೆ 52 ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಿತ್ತು. ಮುಂದಿನ ವಿಚಾರಣೆಯವರೆಗೆ ಹೈಕೋರ್ಟ್‌ನ ಮಧ್ಯಂತರ ಆದೇಶ ಈ ನಿರ್ಧಾರವನ್ನು ತಡೆನೀಡಿದೆ.

Karnataka High Court
ಆಳಂದ ಗಲಭೆ ಪ್ರಕರಣ: ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com