ಮುಂಗಾರು ದುರ್ಬಲ: ರಾಜ್ಯದಲ್ಲಿ ತೀವ್ರ ಬರ ಭೀತಿ; ಜಲಬಿಕ್ಕಟ್ಟು ಎದುರಿಸಲು ರಾಜ್ಯ ಸರ್ಕಾರ ಸಿದ್ಧತೆ..!

ರಾಜ್ಯ ಸರ್ಕಾರದ ಮೊದಲ ಆದ್ಯತೆ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ನೋಡಿಕೊಳ್ಳುವುದಾಗಿದೆ. ತುರ್ತು ಅಗತ್ಯಗಳನ್ನು ಪೂರೈಸಲು ಈಗಾಗಲೇ ಪ್ರತಿ ಜಿಲ್ಲೆಯ ವೈಯಕ್ತಿಕ ಠೇವಣಿ (PD) ಖಾತೆಗೆ 5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
Deputy Chief Minister Dr G Parameshwara chairs a review meeting of the Revenue department at Suvarna Vidhana Soudha in Belagavi on Wednesday.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬುಧವಾರ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅಧ್ಯಕ್ಷತೆಯಲ್ಲಿ ಕಂದಾಯ ಇಲಾಖೆಯ ಪರಿಶೀಲನಾ ಸಭೆ ನಡೆಯಿತು.
Updated on

ಬೆಳಗಾವಿ: ಜುಲೈ ತಿಂಗಳಲ್ಲಿಯೂ ನೈಋತ್ಯ ಮುಂಗಾರು ದುರ್ಬಲವಾಗಿಯೇ ಮುಂದುವರಿದರೆ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಅದನ್ನು ಸಮರ್ಥವಾಗಿ ಎದುರಿಸಲು ರಾಜ್ಯ ಸಿದ್ಧತೆ ಆರಂಭಿಸಿದೆ.

ಈ ನಿಟ್ಟಿನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಯಿತು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಸಚಿವರು, ಮಳೆಯ ಪ್ರಮಾಣ ಸುಧಾರಿಸದಿದ್ದರೆ ರಾಜ್ಯದಲ್ಲಿ ಇದುವರೆಗೆ ಕಂಡಿರದಷ್ಟು ಗಂಭೀರ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರದ ಮೊದಲ ಆದ್ಯತೆ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ನೋಡಿಕೊಳ್ಳುವುದಾಗಿದೆ. ತುರ್ತು ಅಗತ್ಯಗಳನ್ನು ಪೂರೈಸಲು ಈಗಾಗಲೇ ಪ್ರತಿ ಜಿಲ್ಲೆಯ ವೈಯಕ್ತಿಕ ಠೇವಣಿ (PD) ಖಾತೆಗೆ 5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅಗತ್ಯವಿದ್ದಲ್ಲಿ ಹೆಚ್ಚುವರಿ ಅನುದಾನವನ್ನೂ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ರಾಜ್ಯದ ಬರ ನಿರ್ವಹಣಾ ಕಾರ್ಯಯೋಜನೆಯನ್ನು ಜಿಲ್ಲಾಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮಳೆ ವಿಳಂಬವಾಗಿರುವುದರಿಂದ ರಾಜ್ಯದ ಹಲವು ಭಾಗಗಳಲ್ಲಿ ಬಿತ್ತನೆ ಕಾರ್ಯಕ್ಕೆ ತೀವ್ರ ಹಿನ್ನಡೆಯಾಗಿದೆ. ಜುಲೈನಲ್ಲಿ ಮಳೆ ಬಂದರೂ ಕೃಷಿ ಚಟುವಟಿಕೆಗಳು ತಡವಾಗಿ ಆರಂಭವಾಗಲಿದ್ದು, ಮುಂಗಾರು ಮತ್ತಷ್ಟು ವಿಳಂಬವಾದರೆ ಬರ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

Deputy Chief Minister Dr G Parameshwara chairs a review meeting of the Revenue department at Suvarna Vidhana Soudha in Belagavi on Wednesday.
ಮುಂಗಾರು ಮಳೆ ಕೊರತೆ: ಮೈಸೂರಿನಲ್ಲಿ ವರುಣನಿಗೆ ಕಪ್ಪೆ ಮೆರವಣಿಗೆ ಹೊರಟ ಮಕ್ಕಳು-Video

ಕಂದಾಯ ಇಲಾಖೆಯ ಬಾಕಿ ಇರುವ ಪೌತಿ, ಪೋಡಿ ಹಾಗೂ ಕಂದಾಯ ದಾಖಲೆಗಳ ತಿದ್ದುಪಡಿ ಸೇರಿದಂತೆ ಭೂ ಆಡಳಿತಕ್ಕೆ ಸಂಬಂಧಿಸಿದ ಎಲ್ಲ ಕಾರ್ಯಗಳನ್ನು ತಂತ್ರಜ್ಞಾನದ ನೆರವಿನಿಂದ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಧಾರ್ಮಿಕ ದತ್ತಿ ಇಲಾಖೆಯ ಪರಿಶೀಲನೆ ನಡೆಸಿದ ಅವರು, ಎ, ಬಿ ಹಾಗೂ ಸಿ ವರ್ಗದ ದೇವಸ್ಥಾನಗಳ ಭೂಮಿಯ ಸಮೀಕ್ಷೆ, ಗಡಿ ಗುರುತು ನಿಗದಿ ಹಾಗೂ ಅತಿಕ್ರಮಣ ತೆರವು ಕಾರ್ಯವನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಮುಖ ಯಾತ್ರಾ ಕ್ಷೇತ್ರಗಳಿಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗುವುದು. ದೇವಸ್ಥಾನಗಳ ಆದಾಯವನ್ನು ಆಯಾ ದೇವಸ್ಥಾನಗಳ ಅಭಿವೃದ್ಧಿಗಾಗಿಯೇ ಬಳಸಬೇಕು. ದೇವಸ್ಥಾನಗಳ ಆಡಳಿತದಲ್ಲಿ ಪಾರದರ್ಶಕತೆ ತರಲು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ರಾಜ್ಯದಲ್ಲಿ ಕ್ರೀಡಾ ಕ್ಷೇತ್ರಕ್ಕೂ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ ಎಂದು ಹೇಳಿದ ಡಾ. ಪರಮೇಶ್ವರ್, ಎಲ್ಲಾ ಜಿಲ್ಲೆಗಳಲ್ಲೂ ಗುಣಮಟ್ಟದ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುವುದು ಎಂದರು.

ಬಳಿಕ ಗೃಹ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ಶೇ.3ರಷ್ಟು ಮೀಸಲಾತಿ ಈಗಾಗಲೇ ಜಾರಿಯಲ್ಲಿದ್ದು, ವಿವಿಧ ಸರ್ಕಾರಿ ಇಲಾಖೆಗಳ 72 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ ನೀಡಲಾಗುವುದು ಎಂದು ಪುನರುಚ್ಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com