ಬೆಂಗಳೂರು ಕಲ್ಲು ಕ್ವಾರಿ ದುರಂತ ಅತ್ಯಂತ ನೋವಿನ ಘಟನೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ

ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಲ್ಲು ಕ್ವಾರಿಯಲ್ಲಿ ಗುರುವಾರ ಬೃಹತ್ ಗ್ರಾನೈಟ್ ಬಂಡೆ ಕುಸಿದು ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ.
President Draupadi Murmu
ರಾಷ್ಟ್ರಪತಿ ದ್ರೌಪದಿ ಮುರ್ಮು
Updated on

ನವದೆಹಲಿ: ಕರ್ನಾಟಕದ ಬೆಂಗಳೂರಿನ ಮಾಗಡಿ ರಸ್ತೆ ಬಳಿ ಇರುವ ಎರಡು ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಎಂಟು ಜನ ಮೃತಪಟ್ಟಿದ್ದು,ಜೀವಹಾನಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಲ್ಲು ಕ್ವಾರಿಯಲ್ಲಿ ಗುರುವಾರ ಬೃಹತ್ ಗ್ರಾನೈಟ್ ಬಂಡೆ ಕುಸಿದು ಎಂಟು ಕಾರ್ಮಿಕರು ಮೃತಪಟ್ಟಿದ್ದು, ಅವರಲ್ಲಿ ಹೆಚ್ಚಾಗಿ ಬಿಹಾರದ ಮೂಲದವರಾಗಿದ್ದಾರೆ.

"ಕರ್ನಾಟಕದ ಬೆಂಗಳೂರು ನಗರ ಜಿಲ್ಲೆಯ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಜೀವಹಾನಿಯಿಂದ ದುಃಖಿತಳಾಗಿದ್ದೇನೆ. ಇದು ಅತ್ಯಂತ ನೋವಿನ ಘಟನೆ. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಮುರ್ಮು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

President Draupadi Murmu
ಕ್ವಾರಿ ದುರಂತ; ಸ್ಫೋಟದಿಂದ ಈ ದುರಂತ ಸಂಭವಿಸಿಲ್ಲ- ಸಿಎಂ ಡಿಕೆ ಶಿವಕುಮಾರ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com