ಎಲ್ ನಿನೋ ಪರಿಣಾಮ ಎದುರಿಸಲು ರಾಜ್ಯ ಸಜ್ಜು: ಗ್ರಾಮೀಣ ಕುಡಿಯುವ ನೀರಿಗೆ 117 ಕೋಟಿ ರೂ. ಬಿಡುಗಡೆ- ಸಚಿವ ಈಶ್ವರ ಖಂಡ್ರೆ!

ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆಗಳ ಒಳಗಾಗಿ ಪರಿಹರಿಸುವಂತೆ ಸೂಚಿಸಲಾಗಿದೆ.
Minister Eshwar Khandre
ಸಚಿವ ಈಶ್ವರ ಬಿ ಖಂಡ್ರೆ
Updated on

ಬೆಂಗಳೂರು: ಎನ್ ನಿ ನೋ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಕೊರತೆ ಆಗಿದ್ದು, ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಮುಂಗಡವಾಗಿ 117 ಕೋಟಿ ರೂ. ಬಿಡುಗಡೆ ಮಾಡಲಾಗಿದೆ, ನೀರು ಪೂರೈಕೆಗೆ ಹಣದ ಕೊರತೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಸುಮಾರು 85 ಕೋಟಿ ರೂಪಾಯಿಗಳಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ. 30 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.

ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆಗಳ ಒಳಗಾಗಿ ಪರಿಹರಿಸುವಂತೆ ಸೂಚಿಸಲಾಗಿದೆ. ಖಾಸಗಿ ತೆರೆದ ಬಾವಿ, ಬೋರ್ ವೆಲ್ ಗಳಿಂದ ನೀರುಪಡೆದು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ತೀರಾ ಅಗತ್ಯಬಿದ್ದ ಸಂದರ್ಭದಲ್ಲಿ ಮಾತ್ರ ಕೊಳವೆ ಬಾವಿ ಕೊರೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

Minister Eshwar Khandre
ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ!

ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಕಳೆದ 2-3 ದಿನದಿಂದ ಮಳೆ ಆಗುತ್ತಿದ್ದು, ಕೆಲವು ಜಲಾಶಯಗಳಿಗೆ ನೀರು ಬರುತ್ತಿದೆ. ಈ ಸಂಕಷ್ಟದ ಸಮಯದಲ್ಲಿ ಜೀವಜಲವನ್ನು ಹಿತಮಿತವಾಗಿ ಜನರು ಬಳಸಬೇಕು. ಪೋಲು ಮಾಡಬಾರದು ಎಂದು ಮನವಿ ಮಾಡಿದ ಅವರು, ಪಂಚಾಯ್ತಿಗಳು ನೀರು ಸೋರಿಕೆ ಆಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com