

ತುಮಕೂರು: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 (SIR) ಕರ್ತವ್ಯಕ್ಕೆ ತೆರಳುವಾಗ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ವಿಎಒ 24 ವರ್ಷದ ಭುವನಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ತುಮಕೂರಿನ ಗೂಳೂರು ಬಳಿ ಬೈಕ್ನಲ್ಲಿ ಭುವನಾ ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿತ್ತು. ಕೂಡಲೇ ಅವರನ್ನು ಚಿಕಿತ್ಸೆಗೆಂದು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಮೃತಪಟ್ಟಿದ್ದಾರೆ.