ಆರೋಪ ಮಾಡುವುದು ವಿರೋಧ ಪಕ್ಷದ ಕೆಲಸ, ಸರ್ಕಾರವಾಗಿ ಎಲ್ಲರಿಗೂ ನ್ಯಾಯ ದೊರಕಿಸುವುದು ನಮ್ಮ ಜವಾಬ್ದಾರಿ: ಡಿ ಕೆ ಶಿವಕುಮಾರ್-Video

ಚುನಾವಣಾ ಆಯೋಗವು ಕಾನೂನು ಮತ್ತು ನಿಗದಿತ ಪ್ರಕ್ರಿಯೆಯ ಪ್ರಕಾರವೇ ಕಾರ್ಯನಿರ್ವಹಿಸುತ್ತಿದೆ. ನಮ್ಮ ಪಾಲಿಗೆ ಅಗತ್ಯವಿರುವ ಕಡೆ ಪ್ರತಿಭಟನೆಗಳನ್ನು ನಡೆಸುತ್ತೇವೆ. ಆದರೆ ಅವುಗಳನ್ನು ಕಾನೂನುಬದ್ಧ ಹಾಗೂ ಪ್ರಜಾಪ್ರಭುತ್ವದ ರೀತಿಯಲ್ಲಿಯೇ ನಡೆಸುತ್ತೇವೆ ಎಂದು ಹೇಳಿದರು.
D K Shivakumar
ಡಿ ಕೆ ಶಿವಕುಮಾರ್
Updated on

ಆರೋಪ ಮಾಡುವುದು ಪ್ರತಿಪಕ್ಷದ ಕೆಲಸ. ಸರ್ಕಾರವಾಗಿ ಎಲ್ಲರಿಗೂ ನ್ಯಾಯ ದೊರೆಯುವಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳುವಂತೆ ಎಲ್ಲ ಮತದಾರರಿಗೂ ನಾವು ಮನವಿ ಮಾಡಿದ್ದೇವೆ ಎಂದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇಂದು ದೇವನಹಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗವು ಕಾನೂನು ಮತ್ತು ನಿಗದಿತ ಪ್ರಕ್ರಿಯೆಯ ಪ್ರಕಾರವೇ ಕಾರ್ಯನಿರ್ವಹಿಸುತ್ತಿದೆ. ನಮ್ಮ ಪಾಲಿಗೆ ಅಗತ್ಯವಿರುವ ಕಡೆ ಪ್ರತಿಭಟನೆಗಳನ್ನು ನಡೆಸುತ್ತೇವೆ. ಆದರೆ ಅವುಗಳನ್ನು ಕಾನೂನುಬದ್ಧ ಹಾಗೂ ಪ್ರಜಾಪ್ರಭುತ್ವದ ರೀತಿಯಲ್ಲಿಯೇ ನಡೆಸುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇವನಹಳ್ಳಿಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಇಂದು 14 ಅಡಿ ಎತ್ತರದ ಡಾ. ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯನ್ನು ಉದ್ಘಾಟಿಸಿ ಅನಾವರಣಗೊಳಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಕೆ.ಎಚ್. ಮುನಿಯಪ್ಪ ಅವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗೆ ಪೊಲೀಸ್ ಗೌರವ ವಂದನೆ ಸಲ್ಲಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com