ರಾಜ್ಯದಲ್ಲಿ SIR ಕರ್ತವ್ಯದ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಕುಸಿದು ಬಿದ್ದು BLO ಸಾವು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕರ್ತವ್ಯದ ವೇಳೆಯಲ್ಲೇ ಹೃದಯಾಘಾತದಿಂದ BLO ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಭದ್ರಾವತಿ ತಾಲೂಕಿನ ಕಲ್ಲಾಪುರ ಗ್ರಾಮದಲ್ಲಿ ನಡೆದಿದೆ.
BLO Manjula Dies
ಬಿಎಲ್ಒ ಮಂಜುಳ ನಿಧನ
Updated on

ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕರ್ತವ್ಯದ ವೇಳೆಯಲ್ಲೇ ಹೃದಯಾಘಾತದಿಂದ BLO ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಭದ್ರಾವತಿ ತಾಲೂಕಿನ ಕಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಭದ್ರಾವತಿ ತಾಲೂಕಿನ ಕಲ್ಲಾಪುರದ ಅಂಗನವಾಡಿ ಶಿಕ್ಷಕಿ 52 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ. ಅರಕೆರೆ ಪಂಚಾಯ್ತಿ ವ್ಯಾಪ್ತಿಯ ಕೋಡಿಹೊಸೂರಿನಲ್ಲಿ ಮನೆ ಮನೆಗೆ ತೆರಳಿ ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿದ್ದ ವೇಳೆಯಲ್ಲಿ ಹೃದಯಾಘಾತವಾಗಿ ಮಂಜುಳಾ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

BLO Manjula Dies
ಎಸ್‌ಐಆರ್‌ನಲ್ಲಿ 'ಸಾಮೂಹಿಕ ಅಕ್ರಮ' ಆರೋಪ: ಚುನಾವಣಾಧಿಕಾರಿಗಳಿಗೆ NDA ನಾಯಕರಿಂದ ದೂರು ಸಲ್ಲಿಕೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com