2/3 ಬಹುಮತಕ್ಕಾಗಿ SIR ದುರುಪಯೋಗ, ಸಂವಿಧಾನ ಬದಲಿಸುವ ಸಂಚು: BJP ವಿರುದ್ಧ ಬಿ.ಕೆ ಹರಿಪ್ರಸಾದ್ ವಾಗ್ದಾಳಿ

CAA ಮತ್ತು NRC ಜಾರಿಗೊಳಿಸಲು ಪ್ರಯತ್ನಿಸಿದ ಬಳಿಕ ಈಗ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು SIR ಅನ್ನು ಹೊಸ ಅಸ್ತ್ರವಾಗಿ ಬಳಸುತ್ತಿದ್ದಾರೆ.
BK Hariprasad
ಬಿ.ಕೆ ಹರಿಪ್ರಸಾದ್
Updated on

ಬೆಂಗಳೂರು: ವಿಶೇಷ ಮತದಾರರ ತೀವ್ರ ಪರಿಶೀಲನೆ (SIR) ಪ್ರಕ್ರಿಯೆ ಮೂಲಕ ಎರಡು-ಮೂರರಷ್ಟು (2/3) ಬಹುಮತ ಗಳಿಸಿ, ಸಂವಿಧಾನ ಬದಲಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜನರ ವಿಶ್ವಾಸ ಗೆದ್ದು ನೇರವಾಗಿ ಅಧಿಕಾರಕ್ಕೆ ಬರಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೆಲವು ರಾಜ್ಯಗಳಲ್ಲಿ SIR ಪ್ರಕ್ರಿಯೆಯ ಮೂಲಕ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಪ್ರಯತ್ನ ನಡೆದಿದೆ" ಎಂದು ಟೀಕಿಸಿದರು.

CAA ಮತ್ತು NRC ಜಾರಿಗೊಳಿಸಲು ಪ್ರಯತ್ನಿಸಿದ ಬಳಿಕ ಈಗ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು SIR ಅನ್ನು ಹೊಸ ಅಸ್ತ್ರವಾಗಿ ಬಳಸುತ್ತಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಇನ್ನೂ 27 ಲಕ್ಷ ಮತದಾರರ ಭವಿಷ್ಯ ತೀರ್ಮಾನವಾಗಬೇಕಿದೆ ಎಂದು ಆರೋಪಿಸಿದರು.

BK Hariprasad
ರಾಜ್ಯದಲ್ಲಿ SIR ಕರ್ತವ್ಯದ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಕುಸಿದು ಬಿದ್ದು BLO ಸಾವು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com