Lokayukta raid-ಅಕ್ರಮ ಆಸ್ತಿ ಪ್ರಕರಣ: KBJNL ಕಾರ್ಯನಿರ್ವಾಹಕ ಎಂಜಿನಿಯರ್ ಗೆ ಸೇರಿದ 7 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ-Video

ಲೋಕಾಯುಕ್ತ ಅಧಿಕಾರಿಗಳು ಚಿಕ್ಕಹೊನ್ನಕುಣಿ ಪ್ರದೇಶದಲ್ಲಿರುವ ಅವರ ಕಚೇರಿ, ನಿವಾಸ ಹಾಗೂ ಪತ್ನಿ ಮತ್ತು ಸಂಬಂಧಿಕರಿಗೆ ಸೇರಿದ ಆಸ್ತಿಗಳಲ್ಲಿ ಶೋಧ ಕಾರ್ಯ ನಡೆಸಿ, ದಾಖಲೆಗಳು ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರು.
Investigation at Basanagowda house
ಎಂಜಿನಿಯರ್ ಬಸನಗೌಡ ಮನೆಯಲ್ಲಿ ಶೋಧ ಕಾರ್ಯಾಚರಣೆ
Updated on

ರಾಯಚೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (KBJNL) ಕಾರ್ಯನಿರ್ವಾಹಕ ಎಂಜಿನಿಯರ್ ಬಸನಗೌಡ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಕರ್ನಾಟಕ ಲೋಕಾಯುಕ್ತ ಇಂದು ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿದೆ.

ಲೋಕಾಯುಕ್ತ ಅಧಿಕಾರಿಗಳು ಚಿಕ್ಕಹೊನ್ನಕುಣಿ ಪ್ರದೇಶದಲ್ಲಿರುವ ಅವರ ಕಚೇರಿ, ನಿವಾಸ ಹಾಗೂ ಪತ್ನಿ ಮತ್ತು ಸಂಬಂಧಿಕರಿಗೆ ಸೇರಿದ ಆಸ್ತಿಗಳಲ್ಲಿ ಶೋಧ ಕಾರ್ಯ ನಡೆಸಿ, ದಾಖಲೆಗಳು ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರು.

Investigation at Basanagowda house
Watch | ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ; ಅಪಾರ ನಗದು-ಚಿನ್ನಾಭರಣ ಪತ್ತೆ

ಇಂದು ಬುಧವಾರ ಬೆಳಗ್ಗೆ ಲೋಕಾಯುಕ್ತ ತಂಡವು ರಾಯಚೂರು ನಗರದ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿರುವ ಬಸನಗೌಡ ಅವರ ನಿವಾಸದ ಮೇಲೆ ದಾಳಿ ನಡೆಸಿತು. ಅಲ್ಲದೆ, ಯಕ್ಲಾಸ್ಪುರ ಗ್ರಾಮದಲ್ಲಿರುವ ಅವರ ಸಹೋದರ ಶಿವನಗೌಡ ಅವರಿಗೆ ಸೇರಿದ 'ಸೆಲೆಬ್ರಿಟಿ ಗಾರ್ಡನ್' ನಿವಾಸದಲ್ಲೂ ಶೋಧ ನಡೆಸಲಾಯಿತು. ಇದೇ ಗ್ರಾಮದ ಮತ್ತಿಬ್ಬರು ಸಹೋದರರಾದ ದೊಡ್ಡನಗೌಡ ಮತ್ತು ಶರಂಗೌಡ ಅವರ ಮನೆಗಳ ಮೇಲೂ ದಾಳಿ ನಡೆಯಿತು.

ವರದಿಗಳ ಪ್ರಕಾರ, ಬಸನಗೌಡ ಅವರ ಪತ್ನಿ ಅನಿತಾ ಶೆಟ್ಟಿ ಅವರ ಹೆಸರಿನಲ್ಲಿ ಬೈಪಾಸ್ ರಸ್ತೆಯಲ್ಲಿರುವ 'ಶ್ರೀ ಫಿಲ್ಲಿಂಗ್ ನಯಾರಾ ಪೆಟ್ರೋಲ್ ಬಂಕ್' ಮೇಲೂ ಲೋಕಾಯುಕ್ತ ದಾಳಿ ನಡೆಸಿದೆ. ಇದರ ಜೊತೆಗೆ ಪೆಟ್ರೋಲ್ ಬಂಕ್ ಪಕ್ಕದಲ್ಲಿರುವ ಗೋದಾಮು, ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಯಕ್ಲಾಸ್ಪುರ ಸಮೀಪದ ಕುಟುಂಬದ ಫಾರ್ಮ್‌ಹೌಸ್‌ನಲ್ಲಿಯೂ ಶೋಧ ಕಾರ್ಯ ನಡೆಸಲಾಗಿದೆ.

ಇಂದು ಆರಂಭವಾದ ಈ ಕಾರ್ಯಾಚರಣೆಯಲ್ಲಿ ಉಪ ಪೊಲೀಸ್ ಅಧೀಕ್ಷಕರು (DySP) ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್‌ಗಳ ನೇತೃತ್ವದ ಹಲವು ತಂಡಗಳು ಭಾಗವಹಿಸಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com