SIR ಸಂಬಂಧಿತ ಕೆಲಸಕ್ಕಾಗಿ ರಜೆಯ ಮೇಲೆ ಊರಿಗೆ ಮರಳಿದ್ದಾಗ ರಸ್ತೆ ಅಪಘಾತ; CISF ಯೋಧ ಸಾವು

ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ಗ್ರಾಮದ ಪುತ್ಯೆ ನಿವಾಸಿ ಸೀತಾರಾಮ ಗೌಡ ಎಂದು ಗುರುತಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Representative Image
ಪ್ರಾತಿನಿಧಿಕ ಚಿತ್ರ
Updated on

ಮಂಗಳೂರು: ಜಮ್ಮುವಿನಲ್ಲಿ ನಿಯೋಜನೆಗೊಂಡಿದ್ದ ಸಿಐಎಸ್‌ಎಫ್ (CISF) ಯೋಧರೊಬ್ಬರು, ಎಸ್‌ಐಆರ್ (SIR) ಸಂಬಂಧಿತ ಕೆಲಸಕ್ಕಾಗಿ ರಜೆಯ ಮೇಲೆ ಊರಿಗೆ ಮರಳಿದ್ದಾಗ ಇಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ಗ್ರಾಮದ ಪುತ್ಯೆ ನಿವಾಸಿ ಸೀತಾರಾಮ ಗೌಡ ಎಂದು ಗುರುತಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಅವರು ಸಿಐಎಸ್‌ಎಫ್ (CISF) ನಲ್ಲಿ ಸೇವೆ ಸಲ್ಲಿಸುತ್ತಿದ್ದರು ಮತ್ತು ಜಮ್ಮುವಿನ ಕೇಂದ್ರ ಕಾರಾಗೃಹದಲ್ಲಿ ನಿಯೋಜನೆಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗೌಡ ಅವರು ಜುಲೈ 3 ರಂದು ರಜೆಯ ಮೇಲೆ ತಮ್ಮ ಊರಿಗೆ ಬಂದಿದ್ದರು. ಸೋಮವಾರ, ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ (SIR) ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಲು ತಮ್ಮ ಹಳ್ಳಿಗೆ ಪ್ರಯಾಣ ಬೆಳೆಸಿದ್ದರು. ಅಲ್ಲಿಂದ ಹಿಂದಿರುಗುವಾಗ, ಮಂಗಳೂರಿನ ಕದ್ರಿ ಪೊಲೀಸ್ ವ್ಯಾಪ್ತಿಯ ಕೆಪಿಟಿ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ.

Representative Image
ಭಯಾನಕ ಅಪಘಾತ: ಫುಟ್​ಪಾತ್​ನಲ್ಲಿ ಕುಳಿತಿದ್ದ ಕುಟುಂಬದ ಮೇಲೆ ಹರಿದ ಟಿಪ್ಪರ್; ತಂದೆ, ಮೂವರು ಮಕ್ಕಳು ಸ್ಥಳದಲ್ಲೇ ಸಾವು; Video

ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದರು ಮತ್ತು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಕೊಯ್ಲ-ಕಡಬದ ಇಡೀ ಗ್ರಾಮವು ಅವರ ನಿಧನಕ್ಕೆ ಸಂತಾಪ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com