ಬೆಳಗಾವಿಯಲ್ಲಿ 3 ದಿನಗಳ RSS ಸಭೆ: ದೇಶವ್ಯಾಪಿ ಶಾಖಾ ವಿಸ್ತರಣೆಗೆ ಕಾರ್ಯಸೂಚಿ

ತಳಮಟ್ಟದಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಕುರಿತು ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.
Participants attend the three-day Rashtriya Swayamsevak Sangh meeting in Belagavi on Friday
ಬೆಳಗಾವಿಯಲ್ಲಿ ಆರಂಭವಾದ ಮೂರು ದಿನಗಳ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸಭೆಯಲ್ಲಿ ಭಾಗವಹಿಸಿದ ಪ್ರತಿನಿಧಿಗಳು.
Updated on

ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ವಾರ್ಷಿಕ ಅಖಿಲ ಭಾರತ ಪ್ರಾಂತ ಪ್ರಚಾರಕರ ಸಭೆ ನಿನ್ನೆ ಶುಕ್ರವಾರ ಬೆಳಗಾವಿಯಲ್ಲಿ ಆರಂಭಗೊಂಡಿದ್ದು, ದೇಶಾದ್ಯಂತ ಶಾಖೆಗಳ ವಿಸ್ತರಣೆ, ಶತಮಾನೋತ್ಸವ ಕಾರ್ಯಕ್ರಮಗಳ ಪರಿಶೀಲನೆ ಹಾಗೂ ಮುಂದಿನ ಸಾಲಿನ ಸಂಘಟನಾ ಆದ್ಯತೆಗಳನ್ನು ಅಂತಿಮಗೊಳಿಸುವುದು ಪ್ರಮುಖ ಅಜೆಂಡಾವಾಗಿದೆ.

ಉನ್ನತ ಮಟ್ಟದ ಈ ಸಭೆಯಲ್ಲಿ ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಎಲ್ಲಾ ಸಹ-ಸರಕಾರ್ಯವಾಹರು, ಅಖಿಲ ಭಾರತ ವಿಭಾಗಗಳ ಮುಖ್ಯಸ್ಥರು, ಕಾರ್ಯಕಾರಿ ಸಮಿತಿ ಸದಸ್ಯರು, ಕ್ಷೇತ್ರ ಪ್ರಚಾರಕರು, ಸಹ-ಕ್ಷೇತ್ರ ಪ್ರಚಾರಕರು, ದೇಶದ 46 ಪ್ರಾಂತಗಳ ಪ್ರಾಂತ ಪ್ರಚಾರಕರು ಮತ್ತು ಸಹ-ಪ್ರಚಾರಕರು ಹಾಗೂ ಸಂಘ ಪ್ರೇರಿತ ವಿವಿಧ ಸಂಘಟನೆಗಳ ಸಂಘಟನಾ ಕಾರ್ಯದರ್ಶಿಗಳು ಭಾಗವಹಿಸಿದ್ದಾರೆ.

ತಳಮಟ್ಟದಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಕುರಿತು ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.

Participants attend the three-day Rashtriya Swayamsevak Sangh meeting in Belagavi on Friday
RSS ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ: ಬಿ.ಕೆ ಹರಿಪ್ರಸಾದ್

ಕಳೆದ ಮಾರ್ಚ್ ನಂತರ ದೇಶಾದ್ಯಂತ ನಡೆದ ತರಬೇತಿ ಶಿಬಿರಗಳ ವರದಿಗಳನ್ನು ಸಮಗ್ರವಾಗಿ ಪರಿಶೀಲಿಸುವುದರ ಜೊತೆಗೆ, ಶಾಖಾ ಮಟ್ಟದಲ್ಲಿ ರೂಪಿಸಿರುವ ಕಾರ್ಯಯೋಜನೆಗಳ ಅನುಷ್ಠಾನದ ಪ್ರಗತಿಯ ಮೌಲ್ಯಮಾಪನವೂ ನಡೆಯಲಿದೆ.

ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ಕೈಗೊಂಡಿರುವ ಶಾಖಾ ವಿಸ್ತರಣೆಯ ಪ್ರಗತಿಯನ್ನು ಪರಿಶೀಲಿಸಿ, ದೇಶಾದ್ಯಂತ ಸಂಘಟನೆಯ ಜಾಲವನ್ನು ಮತ್ತಷ್ಟು ವಿಸ್ತರಿಸುವ ಕಾರ್ಯತಂತ್ರವನ್ನು ಸಭೆಯಲ್ಲಿ ರೂಪಿಸಲಾಗುತ್ತದೆ.

ಇದಲ್ಲದೆ, ಸಂಘದ ಶತಮಾನೋತ್ಸವ ವರ್ಷದಲ್ಲಿ ಇದುವರೆಗೆ ನಡೆದ ಕಾರ್ಯಕ್ರಮಗಳ ವಿಮರ್ಶೆ ನಡೆಸಿ, ಅಕ್ಟೋಬರ್ 20ರಂದು ವಿಜಯದಶಮಿಯಂದು ಮುಕ್ತಾಯಗೊಳ್ಳಲಿರುವ ವರ್ಷದ ಉಳಿದ ಕಾರ್ಯಕ್ರಮಗಳ ಯೋಜನೆ ಕುರಿತು ಚರ್ಚೆ ನಡೆಯಲಿದೆ.

2026–27ನೇ ಸಾಲಿನಲ್ಲಿ ಮೋಹನ್ ಭಾಗವತ್ ಅವರ ದೇಶವ್ಯಾಪಿ ಪ್ರವಾಸ ಕಾರ್ಯಕ್ರಮ ಹಾಗೂ ಇತರೆ ಸಂಘಟನಾ ಆದ್ಯತೆಗಳ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ.

ಬೆಳಗಾವಿ ಸಭೆ ಕುರಿತು ಬಿ.ಕೆ. ಹರಿಪ್ರಸಾದ್ ಟೀಕೆ

ಇದೇ ವೇಳೆ, ಬೆಳಗಾವಿಯಲ್ಲಿ ನಡೆಯುತ್ತಿರುವ ಮೂರು ದಿನಗಳ ಆರ್‌ಎಸ್‌ಎಸ್ ಸಭೆ ಕುರಿತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಅವರು ಯಾಕೆ ಸಭೆ ನಡೆಸುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಈ ಸಭೆಯ ಬಳಿಕ ಯಾವ ರೀತಿಯ ಅನಾಹುತ ಸಂಭವಿಸುತ್ತದೆ ಎಂಬುದನ್ನು ನೋಡೋಣ. ನಂತರ ನಾನು ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.

ಅಯೋಧ್ಯೆ ರಾಮಮಂದಿರ ದೇಣಿಗೆ ದುರ್ಬಳಕೆ ಪ್ರಕರಣವನ್ನು ಉಲ್ಲೇಖಿಸಿದ ಅವರು, ಈ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com