ಬಿಡದಿ ಟೌನ್ ಶಿಪ್: ಸರ್ವೇಗೆ ಬಂದ ಅಧಿಕಾರಿಗಳಿಗೆ ರೈತ ಮಹಿಳೆಯರಿಂದ ಪೊರಕೆ ಏಟು: ಕಾರಿನ ಗ್ಲಾಸ್ ಪೀಸ್!

ಜೆಎಂಸಿ ಸರ್ವೇ ನಡೆಸದಂತೆ ಮಂಡಲಹಳ್ಳಿ ಗ್ರಾಮದ ರೈತರು ಎಚ್ಚರಿಕೆ ನೀಡಿದ್ದರು. ಎಚ್ಚರಿಕೆ ಹೊರತಾಗಿಯೂ ಸರ್ವೇ ನಡೆಸಲು ಮುಂದಾದ ಅಧಿಕಾರಿಗಳಿಗೆ ರೈತ ಮಹಿಳೆಯರು ಪೊರಕೆ ಏಟು ಕೊಟ್ಟಿದ್ದಾರೆ.
Bidadi township: officials trying to conduct JMC Survey gets beaten up with broom sticks from farmers
ಬಿಡದಿಯಲ್ಲಿ ಅಧಿಕಾರಿಗಳಿಗೆ ಪೊರಕೆಯಿಂದ ಥಳಿಸಲು ಮುಂದಾದ ಟೌನ್ ಶಿಪ್ ವಿರೋಧಿ ರೈತ ಮಹಿಳೆ online desk
Updated on

ಬಿಡದಿ ಟೌನ್​ಶಿಪ್ ನ್ನು ವಿರೋಧಿಸುತ್ತಿರುವ ಸ್ಥಳೀಯ ರೈತರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಮೀನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ರೈತರು ಕೆರಳಿದ್ದು, ವಿರೋಧದ ನಡುವೆಯೂ ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ.

ಜೆಎಂಸಿ ಸರ್ವೇ ನಡೆಸದಂತೆ ಮಂಡಲಹಳ್ಳಿ ಗ್ರಾಮದ ರೈತರು ಎಚ್ಚರಿಕೆ ನೀಡಿದ್ದರು. ಎಚ್ಚರಿಕೆ ಹೊರತಾಗಿಯೂ ಸರ್ವೇ ನಡೆಸಲು ಮುಂದಾದ ಅಧಿಕಾರಿಗಳಿಗೆ ರೈತ ಮಹಿಳೆಯರು ಪೊರಕೆ ಏಟು ಕೊಟ್ಟಿದ್ದಾರೆ.

Bidadi township: officials trying to conduct JMC Survey gets beaten up with broom sticks from farmers
ಬಿಡದಿ ಟೌನ್ ಶಿಪ್ ಗೆ HDK ವಿರೋಧ ಶುದ್ಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿಯದ್ದು 100 ಎಕರೆ ಜಮೀನಿದೆ- ಎಂ.ಬಿ ಪಾಟೀಲ್

ಸರ್ವೆಗೆ ಬಂದ ಅಧಿಕಾರಿಗಳ ಕಾರನ್ನು ಸುತ್ತುವರಿದು, ಪೊರಕೆ, ಕಲ್ಲುಗಳಿಂದ ಥಳಿಸಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಪೊಲೀಸರು ಇದ್ದರೂ ರೈತರ ಆಕ್ರೋಶ ತಡೆಯಲು ಸಾಧ್ಯವಾಗಲಿಲ್ಲ. ಘಟನೆ ಬೆನ್ನಲ್ಲೇ ಇನ್ನೂ ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ಶ್ರೀನಿವಾಸ ಗೌಡ ರೈತರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಎಎಸ್ಪಿ ರಾಮಚಂದ್ರಯ್ಯ, ಡಿವೈಎಸ್ಪಿ ಗಿರೀಶ್ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.

ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಮಾಡಬೇಡಿ, ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ರೆ ನಾವು ಸುಮ್ಮನೆ ನೋಡ್ತಾ ಕೂರಲ್ಲ. ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬೇಡಿ ಎಂದು ರೈತರಿಗೆ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com