ತುಮಕೂರು: ಇಷ್ಟವಿಲ್ಲದಿದ್ದರೂ ಸೋದರಮಾವನ ಜೊತೆ ಮದುವೆ; ವಿವಾಹಿತೆ ಆತ್ಮಹತ್ಯೆ ಬೆನ್ನಲ್ಲೇ ಪತಿಯೂ ನೇಣಿಗೆ ಶರಣು!

ಇಷ್ಟವಿಲ್ಲದಿದ್ದರೂ ಕುಟುಂಬದ ಒತ್ತಾಯಕ್ಕೆ ಮಣಿದು ಸೋದರಮಾವನೊಂದಿಗೆ ವಿವಾಹವಾಗಿದ್ದ ನವವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿ ಶಿರಾ ತಾಲ್ಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.
ಮೃತ ಗಿರೀಶ್, ಶರಣ್ಯ
ಮೃತ ಗಿರೀಶ್, ಶರಣ್ಯ
Updated on

ತುಮಕೂರು: ಇಷ್ಟವಿಲ್ಲದಿದ್ದರೂ ಕುಟುಂಬದ ಒತ್ತಾಯಕ್ಕೆ ಮಣಿದು ಸೋದರಮಾವನೊಂದಿಗೆ ವಿವಾಹವಾಗಿದ್ದ ನವವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿ ಶಿರಾ ತಾಲ್ಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ. ಇನ್ನು ಪತ್ನಿಯ ಸಾವಿನ ಸುದ್ದಿ ತಿಳಿದೂ ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೃತರನ್ನು 20 ವರ್ಷದ ಶರಣ್ಯ ಮತ್ತು 28 ವರ್ಷದ ಗಿರೀಶ್ ಎಂದು ಗುರುತಿಸಲಾಗಿದೆ. ನಾಲ್ಕು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದಾಗಿನಿಂದಲೂ ಇಬ್ಬರ ನಡುವೆ ಹೊಂದಾಣಿಕೆ ಇರಲಿಲ್ಲ. ನಿತ್ಯ ಜಗಳವಾಡುತ್ತಿದ್ದರು. ಇದರಿಂದ ಬೇಸತ್ತ ಶರಣ್ಯ ಮನೆಯಲ್ಲಿ ಯಾರು ಇಲ್ಲದೆ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ನಂತರ ಗಿರೀಶ್ ಹೊಲದ ಹತ್ತಿರದಲ್ಲಿದ್ದ ಮರಕ್ಕೆ ನೇಣಿಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಗಿರೀಶ್, ಶರಣ್ಯ
ಬದುಕಲು ಆಸೆಯೇ ಇಲ್ಲದಂತೆ ಮಾಡಿದ್ದಾರೆ; ನನ್ನ ಸಾವಿಗೆ ಪತಿ-ನಾದಿನಿ ಕಾರಣ: ಮದುವೆಯಾದ 4 ತಿಂಗಳಿಗೇ ಶಿಕ್ಷಕಿ ಆತ್ಮಹತ್ಯೆ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com