

ಹಿರಿಯ ಸುಪ್ರಸಿದ್ಧ ಹಿನ್ನೆಲೆ ಗಾಯಕಿ, 'ಗಾನಕೋಗಿಲೆ' ದಿ. ಎಸ್. ಜಾನಕಿ ಅವರ ಅಸ್ಥಿ ವಿಸರ್ಜನಾ ಕಾರ್ಯಕ್ರಮ ಶ್ರೀರಂಗಪಟ್ಟಣದ ಪವಿತ್ರ ಗೋಸಾಯ್ ಘಾಟ್ ಬಳಿಯ ಕಾವೇರಿ ನದಿಯಲ್ಲಿ ಭಕ್ತಿಭಾವದಿಂದ ನೆರವೇರಿತು.
ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್. ಜಾನಕಿ ಅವರ ಮೊಮ್ಮಗಳು ಅಪ್ಸರಾ ಅವರು ಪ್ರಸಿದ್ಧ ವೈದಿಕ ಅರ್ಚಕರಾದ ರಮೇಶ್ ಶರ್ಮಾ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಅಪರ ಕ್ರಿಯಾ ಕರ್ಮಗಳನ್ನು ನೆರವೇರಿಸಿ, ಅಸ್ಥಿ ವಿಸರ್ಜನೆ ಮಾಡಿದರು. ಈ ಮೂಲಕ ಗಾನಕೋಗಿಲೆ ಎಸ್. ಜಾನಕಿ ಅವರ ಆತ್ಮ ಪಂಚಭೂತಗಳಲ್ಲಿ ಲೀನವಾಯಿತು.
ವಯೋಸಹಜ ಅನಾರೋಗ್ಯದಿಂದ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಎಸ್ ಜಾನಕಿ ಅವರು ಚಿಕಿತ್ಸೆ ಫಲಕಾರಿಯಾಗದೆ ಕಳೆದ ಶನಿವಾರ ಮೃತಪಟ್ಟಿದ್ದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.