ಬೆಂಗಳೂರು: ಸಹೋದರನ ಪ್ರೀತಿ ನಿರಾಕರಿಸಿದ್ದಕ್ಕೆ ತಮ್ಮನಿಂದ ಕಾನೂನು ವಿದ್ಯಾರ್ಥಿನಿಯ ಹತ್ಯೆ; ಇಬ್ಬರ ಬಂಧನ

ಹೆಚ್​​ಎಎಲ್ ಕೋಡಿಚಿಕ್ಕನಹಳ್ಳಿಯಲ್ಲಿ ಅಮೃತಾ ಕುಟುಂಬ ವಾಸವಾಗಿದ್ದು, ನಾಲ್ಕನೇ ವರ್ಷದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದಳು. ಮೂರು ವರ್ಷಗಳ ಹಿಂದೆ ಓಂ ಶಕ್ತಿ ಮಾಲೆ ಹಾಕುವ ವೇಳೆ ಪರಿಚಯವಾಗಿದ್ದ ಧನುಷ್ ಹಾಗೂ ಅಮೃತಾ ಪರಸ್ಪರ ಪ್ರೀತಿಸುತ್ತಿದ್ದರು.
Amrutha
ಅಮೃತಾ
Updated on

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಸಹೋದರನೊಂದಿಗೆ ಸೇರಿ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ರಾಜಧಾನಿಯ ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಮೃತಾ ಹತ್ಯೆಯಾದ ಯುವತಿ. ಈಕೆಯನ್ನು ಹತ್ಯೆ ಮಾಡಿದ ಆರೋಪದಡಿ ಪ್ರಿಯಕರ ಧನುಷ್ ಹಾಗೂ ಆತನ ಸಹೋದರ ಸೂರ್ಯನನ್ನು ಬಂಧಿಸಲಾಗಿದೆ. ಜುಲೈ 13ರಂದು ಘಟನೆ ನಡೆದಿದ್ದು, ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಅಮೃತಾ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸಿ.ವಿ.ರಾಮನ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್​​ಎಎಲ್ ಕೋಡಿಚಿಕ್ಕನಹಳ್ಳಿಯಲ್ಲಿ ಅಮೃತಾ ಕುಟುಂಬ ವಾಸವಾಗಿದ್ದು, ನಾಲ್ಕನೇ ವರ್ಷದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದಳು. ಮೂರು ವರ್ಷಗಳ ಹಿಂದೆ ಓಂ ಶಕ್ತಿ ಮಾಲೆ ಹಾಕುವ ವೇಳೆ ಪರಿಚಯವಾಗಿದ್ದ ಧನುಷ್ ಹಾಗೂ ಅಮೃತಾ ಪರಸ್ಪರ ಪ್ರೀತಿಸುತ್ತಿದ್ದರು.

ಆದರೆ, ಧನುಷ್ ತನಗೆ ಈಗಾಗಲೇ ಮದುವೆಯಾಗಿ ವಿಚ್ಛೇದನವಾಗಿದ್ದು, ಒಂದು ಮಗು ಇರುವುದನ್ನು ಮುಚ್ಚಿಟ್ಟಿದ್ದ. ಈ ಸತ್ಯ ತಿಳಿಯುತ್ತಿದ್ದಂತೆ ಅಮೃತಾ ಆತನಿಂದ ದೂರವಾಗಿದ್ದಳು.

Amrutha
ಧಾರವಾಡ: ವೈದ್ಯ ಕಿರಣ ಬರ್ಬರ ಹತ್ಯೆ, ಮಗನ ಮೇಲೂ ಹಲ್ಲೆ, ವೈದ್ಯ ಪತ್ನಿ ಪೊಲೀಸ್ ವಶಕ್ಕೆ!

ಇದರಿಂದ ಆಕ್ರೋಶಗೊಂಡ ಧನುಷ್‌ನ ತಮ್ಮ ಸೂರ್ಯ, ಅಣ್ಣನ ಪ್ರೀತಿ ನಿರಾಕರಿಸಿದವಳನ್ನು ಬಿಡುವುದಿಲ್ಲ ಎಂದು ಹೇಳಿಕೊಂಡು ಕಳೆದ ಜುಲೈ 13ರಂದು ಸಂಜೆ ಯುವತಿಯ ಮನೆಯ ಬಳಿ ತೆರಳಿ ಗಲಾಟೆ ಮಾಡಿ, ಆಕೆಯ ಬೆನ್ನು ಮತ್ತು ಎದೆಗೆ ಮನಬಂದಂತೆ ಚಾಕುವಿನಿಂದ ಅಟ್ಟಹಾಸ ಮೆರೆದಿದ್ದ.

ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅಮೃತಾಳನ್ನು ತಕ್ಷಣವೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಮೂರು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿ ಚಿಕಿತ್ಸೆ ಫಲಕಾರಿಯಾಗದೇ, ಜುಲೈ 15ರಂದು ಸಂಜೆ ಆಸ್ಪತ್ರೆಯಲ್ಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com