ತುಮಕೂರಿಗೆ ಬೆಂಗಳೂರಿನ 2ನೇ ವಿಮಾನ ನಿಲ್ದಾಣ ಬಂದರೆ 18-20 ಜಿಲ್ಲೆಗಳಿಗೆ ಪ್ರಯೋಜನ: DCM ಪರಮೇಶ್ವರ್

ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ತಮ್ಮ ತವರು ಜಿಲ್ಲೆ ತುಮಕೂರಿನ ಬಳಿ ಸ್ಥಾಪನೆಯಾಗಬೇಕೆಂಬ ಆಶಯ ವ್ಯಕ್ತಪಡಿಸಿದ ಡಿಸಿಎಂ ಡಾ. ಜಿ ಪರಮೇಶ್ವರ್ ಅವರು, ತಾಂತ್ರಿಕ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಸರ್ಕಾರವು ಸ್ಥಳವನ್ನು ನಿರ್ಧರಿಸುತ್ತದೆ ಎಂದು ಹೇಳಿದರು.
DCM Parameshwara
ಡಿಸಿಎಂ ಪರಮೇಶ್ವರ್
Updated on

ಬೆಂಗಳೂರು: ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ತಮ್ಮ ತವರು ಜಿಲ್ಲೆ ತುಮಕೂರಿನ ಬಳಿ ಸ್ಥಾಪನೆಯಾಗಬೇಕೆಂಬ ಆಶಯ ವ್ಯಕ್ತಪಡಿಸಿದ ಡಿಸಿಎಂ ಡಾ. ಜಿ ಪರಮೇಶ್ವರ್ ಅವರು, ತಾಂತ್ರಿಕ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಸರ್ಕಾರವು ಸ್ಥಳವನ್ನು ನಿರ್ಧರಿಸುತ್ತದೆ ಎಂದು ಹೇಳಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಬರೆದ ಬಹಿರಂಗ ಪತ್ರಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್, 2ನೇ ವಿಮಾನ‌ನಿಲ್ದಾಣ ತುಮಕೂರಿನಲ್ಲಿ ಆಗಬೇಕು ಎಂದು ಬಿ.ವೈ.ವಿಜಯೇಂದ್ರ ಅವರು ತಮಗೆ ತಿಳಿದ ರೀತಿಯಲ್ಲಿ ಹೇಳಿದ್ದಾರೆ. 2ನೇ ವಿಮಾನ ನಿಲ್ದಾಣ ತುಮಕೂರಿಗೆ ಆಗಬೇಕು ಎಂಬ ಇಚ್ಛೆಯನ್ನು ನಾನು ಮೊದಲಿನಿಂದಲೂ ಹೇಳಿದ್ದೇನೆ.

ಸಚಿವ ಎಂ. ಬಿ. ಪಾಟೀಲ್ ನೇತೃತ್ವದ ತಾಂತ್ರಿಕ ಸಮಿತಿಯು ನೆಲಮಂಗಲದ ಕುಣಿಗಲ್ ರಸ್ತೆ ಹಾಗೂ ಬಿಡದಿ ಪ್ರದೇಶಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದ್ದು, ಡಿಜಿಸಿಎ ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ತುಮಕೂರಿನಲ್ಲಿ ವಿಮಾನ ನಿಲ್ದಾಣವಾದರೆ ಸುಮಾರು 20 ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದ್ದು, ತಾಂತ್ರಿಕವಾಗಿಯೂ ಸೂಕ್ತ ಸ್ಥಳವಾಗಿದೆ ಎಂದು ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.

DCM Parameshwara
ತುಮಕೂರಿನ ಶಿರಾದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕೇಂದ್ರ ವಿಮಾನಯಾನ ಸಚಿವರಿಗೆ ಸಚಿವ ವಿ. ಸೋಮಣ್ಣ ಪತ್ರ!

ತುಮಕೂರಿನ ಬಳಿ ವಿಮಾನ ನಿಲ್ದಾಣ ಆದರೆ, ನಮಗೆ ಒಳ್ಳೆಯದು ಏಕೆಂದರೆ ಇದು ಸುಮಾರು 18-20 ಜಿಲ್ಲೆಗಳ ಜನರಿಗೆ ಸಂಪರ್ಕವನ್ನು ಸುಧಾರಿಸುತ್ತದೆ. ಎರಡನೆಯದಾಗಿ, ಇದು ದೇವನಹಳ್ಳಿಯಲ್ಲಿರುವ ಅಸ್ತಿತ್ವದಲ್ಲಿರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದೊಂದಿಗೆ ಹೊಂದಿಕೆಯಾಗಬಹುದು. ಇದನ್ನು ಪರಿಗಣಿಸುವುದು ತಾಂತ್ರಿಕ ತಂಡಗಳಿಗೆ ಬಿಟ್ಟದ್ದು ಎಂದರು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಜನದಟ್ಟಣೆಯನ್ನು ಕಡಿಮೆ ಮಾಡಲು ಯೋಜಿಸಲಾದ ನಗರದ ಎರಡನೇ ವಿಮಾನ ನಿಲ್ದಾಣವು ದಕ್ಷಿಣ ಬೆಂಗಳೂರಿನಲ್ಲಿ ಬರಲಿದೆ ಎಂದು ಶಿವಕುಮಾರ್ ಇತ್ತೀಚೆಗೆ ಹೇಳಿದ್ದರು. ಆದಾಗ್ಯೂ, ಇನ್ನೂ ಯಾವುದೇ ನಿರ್ದಿಷ್ಟ ಸ್ಥಳವನ್ನು ಗುರುತಿಸಲಾಗಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ರಾಜ್ಯ ಸರ್ಕಾರವು ಈ ಹಿಂದೆ ಮೂರು ಸ್ಥಳಗಳನ್ನು ಶಾರ್ಟ್‌ಲಿಸ್ಟ್ ಮಾಡಿತ್ತು: ಹಾರೋಹಳ್ಳಿ (ದಕ್ಷಿಣ ಬೆಂಗಳೂರು) ಬಳಿಯ ಕನಕಪುರ ರಸ್ತೆಯಲ್ಲಿ ಎರಡು ಮತ್ತು ನೆಲಮಂಗಲದ ಕುಣಿಗಲ್ ರಸ್ತೆಯಲ್ಲಿ (ನಗರದ ಪಶ್ಚಿಮ) ಒಂದು. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಪ್ರಸ್ತಾವಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಬಿಡದಿಯಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸುವ ಪ್ರತಿಪಕ್ಷ ಬಿಜೆಪಿ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ, ಪಕ್ಷವು "ರಾಜಕೀಯ ಆಡುತ್ತಿದೆ" ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com