ಶಿವಮೊಗ್ಗ: ವಿದ್ಯಾರ್ಥಿನಿ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಅವರು ವಿದ್ಯಾರ್ಥಿನಿಯನ್ನು 7ನೇ ತರಗತಿಗೆ ದಾಖಲಿಸಿಕೊಳ್ಳಲು 20 ಸಾವಿರ ರೂ. ಲಂಚ ಕೇಳಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
Lokayukta catches School principal taking bribe from student in Shivamogga
ಪ್ರಿನ್ಸಿಪಾಲ್ ನಾಮದೇವ
Updated on

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ವಸತಿ ಶಾಲೆಗೆ ದಾಖಲಿಸಿಕೊಳ್ಳಲು ವಿದ್ಯಾರ್ಥಿನಿಯ ಪೋಷಕರ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಅವರು ವಿದ್ಯಾರ್ಥಿನಿಯನ್ನು 7ನೇ ತರಗತಿಗೆ ದಾಖಲಿಸಿಕೊಳ್ಳಲು 20 ಸಾವಿರ ರೂ. ಲಂಚ ಕೇಳಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಶಾಲೆಗೆ ಡ್ರಮ್‌ ಸೆಟ್ ಬೇಕು ಎಂಬ ನೆಪದಲ್ಲಿ ಪ್ರಿನ್ಸಿಪಾಲ್ ಲಂಚ ಕೇಳಿದ್ದು, ಈ ಸಂಬಂಧ ವಿದ್ಯಾರ್ಥಿನಿಯ ಪೋಷಕರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

Lokayukta catches School principal taking bribe from student in Shivamogga
ಲಂಚಕ್ಕಾಗಿ APP ವಿಚಿತ್ರ ಬೇಡಿಕೆ: ಶೂ, ಚಪ್ಪಲಿ, 9 ಸೀರೆ, 10 ಸಾವಿರ ಕ್ಯಾಶ್ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ! Video

ಇಂದು ಬೆಳಗ್ಗೆ 10 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್, ಇನ್ಸ್‌ಪೆಕ್ಟರ್‌ ರುದ್ರೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com