

ಮೈಸೂರು: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಮಂಗಳವಾರ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನ್ಯೂ ಮಾರುತಿ ಬಡಾವಣೆಯ ಮನೆಯಲ್ಲಿ ಈ ಘಟನೆ ನಡೆದಿದ್ದು, ಹರೀಶ್(42) ಎಂಬ ವ್ಯಕ್ತಿ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ ನೋಟ್ ಬರೆದಿಟ್ಟು ಹರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನಾ ಸ್ಥಳಕ್ಕೆ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.