ನ್ಯಾಯ ಕೇಳಿದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್; ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಂತಿದೆ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಸಂಸತ್ತಿನತ್ತ ಶಾಂತಿಯುತವಾಗಿ ಮೆರವಣಿಗೆ ನಡೆಸುತ್ತಿದ್ದ 20 ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರ ಮೇಲೆ ಲಾಠಿ ಮತ್ತು ಅಶ್ರುವಾಯು ಪ್ರಯೋಗ ಮಾಡಿರುವುದು ಅತ್ಯಂತ ಖಂಡನೀಯ. ನಮ್ಮ ಯುವಕರ ಕನಸುಗಳ ಮೇಲೆಯೇ ಲಾಠಿ ಪ್ರಹಾರ ನಡೆಸಲಾಗಿದೆ.
Siddaramaiah Criticizes MLC H Vishwanath
ಮಾಜಿ ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ನವದೆಹಲಿದಲ್ಲಿ ಸಂಸತ್ ಚಲೋ ಪ್ರತಿಭಟನೆಯ ವೇಳೆ ನೀಟ್ (NEET) ಪರೀಕ್ಷಾ ಅಕ್ರಮದ ವಿರುದ್ಧ ನ್ಯಾಯಕ್ಕಾಗಿ ಮೆರವಣಿಗೆ ನಡೆಸುತ್ತಿದ್ದ ಸಾವಿರಾರು ಯುವಕರ ಮೇಲೆ ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗ ನಡೆಸಿರುವುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಯುವಕರ ಭವಿಷ್ಯವನ್ನು ಹಾಳು ಮಾಡಿದವರಿಗೆ ರಕ್ಷಣೆ ನೀಡುತ್ತಿರುವ ಸರ್ಕಾರ, ನ್ಯಾಯ ಕೇಳಿದ ವಿದ್ಯಾರ್ಥಿಗಳ ಮೇಲೆಯೇ ಬಲಪ್ರಯೋಗ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

"ಸಂಸತ್ತಿನತ್ತ ಶಾಂತಿಯುತವಾಗಿ ಮೆರವಣಿಗೆ ನಡೆಸುತ್ತಿದ್ದ 20 ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರ ಮೇಲೆ ಲಾಠಿ ಮತ್ತು ಅಶ್ರುವಾಯು ಪ್ರಯೋಗ ಮಾಡಿರುವುದು ಅತ್ಯಂತ ಖಂಡನೀಯ. ನಮ್ಮ ಯುವಕರ ಕನಸುಗಳ ಮೇಲೆಯೇ ಲಾಠಿ ಪ್ರಹಾರ ನಡೆಸಲಾಗಿದೆ. ಆದರೆ, ಅವರ ಭವಿಷ್ಯವನ್ನು ನಾಶಪಡಿಸಿದವರಿಗೆ ಮಾತ್ರ ಸರ್ಕಾರ ರಕ್ಷಣೆ ನೀಡುತ್ತಿದೆ" ಎಂದು ಕಿಡಿಕಾರಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ವ್ಯಕ್ತವಾಗುತ್ತಿರುವ ಆಕ್ರೋಶ, ಸಾಮಾಜಿಕ ಹೋರಾಟಗಾರ ಸೋನಂ ವಾಂಗ್‌ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಹಾಗೂ ವಿದ್ಯಾರ್ಥಿಗಳು ಮತ್ತು ನಾಗರಿಕ ಸಮಾಜದ ಪ್ರತಿಭಟನೆಗಳು ಪ್ರತ್ಯೇಕ ಘಟನೆಗಳಲ್ಲ.

ವು ಯುವ ಭಾರತದ ಆತಂಕ ಮತ್ತು ನೋವಿನ ಬಗ್ಗೆ ಕೇಂದ್ರ ಸರ್ಕಾರ ತೋರಿಸುತ್ತಿರುವ ಅಸಂವೇದನಾಶೀಲ ಧೋರಣೆಯ ಪ್ರತಿಬಿಂಬಗಳಾಗಿವೆ. ಸಂಸತ್ತಿನ ಒಳಗೆ ಪ್ರತಿಪಕ್ಷದ ಪ್ರಶ್ನೆಗಳಿಗೆ ಉತ್ತರಿಸಲು ಹಿಂಜರಿಯುವ ಸರ್ಕಾರ, ಹೊರಗೆ ಪ್ರತಿಭಟಿಸುವ ಜನರ ಮೇಲೆ ಬಲಪ್ರಯೋಗ ನಡೆಸುವುದು ಸಂಸದೀಯ ಪ್ರಜಾಪ್ರಭುತ್ವದ ಆತ್ಮವನ್ನೇ ದುರ್ಬಲಗೊಳಿಸುತ್ತದೆ" ಎಂದು ಟೀಕಿಸಿದರು.

Siddaramaiah Criticizes MLC H Vishwanath
CJP Protest LIVE Updates | ಪ್ರತಿಭಟನೆ ಮುಂದುವರಿಯಲಿದೆ; ಭರವಸೆ ಕಳೆದುಕೊಳ್ಳಬೇಡಿ: ಸಿಜೆಪಿಯ ಅಭಿಜೀತ್ ದೀಪ್ಕೆ ವಿನಂತಿ

ನೀಟ್ ಪರೀಕ್ಷೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೇವಲ ಪರೀಕ್ಷೆಯಲ್ಲ, ಹಲವು ವರ್ಷಗಳ ಪರಿಶ್ರಮ, ನಿದ್ದೆಯಿಲ್ಲದ ರಾತ್ರಿಗಳು, ಕುಟುಂಬಗಳ ಆರ್ಥಿಕ ತ್ಯಾಗ ಮತ್ತು ಭವಿಷ್ಯದ ಕನಸುಗಳ ಪ್ರತೀಕವಾಗಿದೆ.

"ಪ್ರತಿ ಅಕ್ರಮ, ಪ್ರತಿ ನಿರ್ಲಕ್ಷ್ಯ ಮತ್ತು ಹೊಣೆಗಾರಿಕೆಯನ್ನು ನಿಗದಿಪಡಿಸುವಲ್ಲಿ ಉಂಟಾಗುವ ಪ್ರತಿ ವಿಳಂಬವು ವಿದ್ಯಾರ್ಥಿಗಳ ವೃತ್ತಿಜೀವನವನ್ನಷ್ಟೇ ಅಲ್ಲ, ದೇಶದ ಸಂಸ್ಥೆಗಳ ಮೇಲಿನ ನಂಬಿಕೆಯನ್ನೂ ಕುಸಿಯುವಂತೆ ಮಾಡುತ್ತದೆ. ನಿರಾಶೆಯಿಂದ ವಿದ್ಯಾರ್ಥಿಗಳು ಜೀವ ಕಳೆದುಕೊಳ್ಳುತ್ತಿರುವ ವರದಿಗಳು ಬರುತ್ತಿರುವಾಗ ಸರ್ಕಾರ ನಿರ್ಲಕ್ಷ್ಯವಲ್ಲ, ಸಹಾನುಭೂತಿ ಮತ್ತು ಹೊಣೆಗಾರಿಕೆ ಪ್ರದರ್ಶಿಸಬೇಕು" ಎಂದು ಒತ್ತಾಯಿಸಿದ್ದಾರೆ.

ಈ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದೂ ಆಗ್ರಹಿಸಿದ್ದಾರೆ.

ಅಲ್ಲದೆ, "ನೀಟ್ ಪರೀಕ್ಷಾ ಹಗರಣದಿಂದ ಸಂಕಷ್ಟಕ್ಕೊಳಗಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ನ್ಯಾಯ ಸಿಗುವಂತೆ ಪಾರದರ್ಶಕ ಹಾಗೂ ನಿಗದಿತ ಅವಧಿಯೊಳಗೆ ತನಿಖೆ ಪೂರ್ಣಗೊಳ್ಳಬೇಕು. ಈ ಪ್ರಜಾಪ್ರಭುತ್ವದ ಹೋರಾಟದಲ್ಲಿ ನೀಟ್ ಪರೀಕ್ಷಾರ್ಥಿಗಳ ಬೆಂಬಲಕ್ಕೆ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರು ಹಾಗೂ ಯುವಕರು ದೃಢವಾಗಿ ನಿಲ್ಲಬೇಕು" ಎಂದು ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com