

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು ಮರುತನಿಖೆಗೆ ಅಸ್ತು ಅಂದಿದೆ. ಸೌಜನ್ಯ ತಾಯಿ ಕುಸುಮವತಿಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ, ವಿಚಾರಣೆ ವೇಳೆ CBI ಅನ್ನು ತರಾಟೆಗೆ ತೆಗೆದುಕೊಂಡಿತು. ತನಿಖಾಧಿಕಾರಿ ಘಟನಾ ಸ್ಥಳಕ್ಕೆ ಯಾಕೆ ಹೋಗಿಲ್ಲ ಎಂದು ಪ್ರಶ್ನಿಸಿತು. ಹದಿನಾಲ್ಕು ವರ್ಷ ಆಯಿತು. ಸರಿಯಾದ ತನಿಖೆಯಾಗಿಲ್ಲ. ಸಾಕ್ಷ್ಯಗಳಿಗೆ ಭದ್ರತೆ ಕೊಡಿ. ಆದೇಶ ಮಾಡಿದ ಬಳಿಕ ಮಧ್ಯಂತರ ವರದಿ ಕೇಳುತ್ತೇವೆ. ಎಸ್ಐಟಿ ರಚನೆಯ ಬಗ್ಗೆ ನಾವು ನಿರ್ಧರಿಸುತ್ತೇವೆ ಎಂದು ತಿಳಿಸಿದೆ.