

ಚಿಕ್ಕಮಗಳೂರು: ಇತ್ತೀಚಿಗಷ್ಟೇ ರಾಜಧಾನಿ ಬೆಂಗಳೂರಿನಲ್ಲಿ ನಕಲಿ 500 ರೂ. ಮುದ್ರಿಸುತ್ತಿದ್ದ ಜಾಲ ಪತ್ತೆ ಹಚ್ಚಿದ್ದ ಪೊಲೀಸರು ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಖೋಟಾ ನೋಟು ದಂಧೆ ಭೇದಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಹೊಸದಾಗಿ ಅಭಿವೃದ್ಧಿಪಡಿಸಲಾದ ಬಡಾವಣೆಯಲ್ಲಿ ಖೋಟಾ ನೋಟು ಚಲಾವಣೆ ಮಾಡುವ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.
ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಗುರುವಾರ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಮಂಗಳೂರಿನ ಮುಹಮ್ಮದ್ ಅಲಿ ಮತ್ತು ಮೂಡಿಗೆರೆ ಸ್ಥಳೀಯ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ.
ಪೊಲೀಸ್ ಅಧಿಕಾರಿಗಳು ಬಂಧಿತರಿಂದ 200 ರೂ. ಮುಖಬೆಲೆಯ 90 ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಒಟ್ಟು ಮೌಲ್ಯ 18,000 ರೂ. ಆಗಿದೆ. ನೋಟಿನ ಮೇಲೆ ಬಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಂದು ನಮೂದಿಸಲಾಗಿದೆ.
ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ವಿಚಾರಣೆ ನಡೆಯುತ್ತಿದೆ.