

ಬೆಂಗಳೂರು: ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಿದರು.
ದೆಹಲಿಗೆ ಪ್ರಯಾಣ ಬೆಳೆಸುವ ಮೊದಲು ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, 'ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು (ಮಾಧ್ಯಮಗಳು) ಆತುರದಲ್ಲಿದ್ದೀರಿ' ಎಂದರು.
ದೆಹಲಿಯಲ್ಲಿ ಸಂಸದರ ಜೊತೆಗಿನ ಸಭೆ ಬಗ್ಗೆ ಕೇಳಿದಾಗ, ಇಂದು ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದರು.
ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಯಾವ ವಿಚಾರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜೊತೆಗೂ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು" ಎಂದು ತಿಳಿಸಿದರು.
ನಾವು ಬರ, ನೀರಿನ ಸಮಸ್ಯೆ ಮತ್ತು ಕಾವೇರಿ ಸಮಸ್ಯೆ, ಮಹಾದಾಯಿ, ಮೇಕೆದಾಟು ಮತ್ತು ಕೃಷ್ಣಾ ನದಿ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇವೆ. ಇದನ್ನೆಲ್ಲ ನಾವು ತಿಳಿಸಬೇಕಾಗಿದೆ. ಚರ್ಚಿಸಲು ಹಲವು ಯೋಜನೆಗಳಿವೆ" ಎಂದು ಶಿವಕುಮಾರ್ ಹೇಳಿದರು.
"ಇಲ್ಲಿ ಬಹಳ ಹಿರಿಯ ನಾಯಕರನ್ನು ಭೇಟಿ ಮಾಡಬೇಕಾಗಿದೆ. ನಾನು ಹಿಂತಿರುಗಿದ ತಕ್ಷಣ, ನಾನು ಅವರನ್ನೂ ಭೇಟಿ ಮಾಡುತ್ತೇನೆ. ನಾನು ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿಗಳು ಮತ್ತು ಎಲ್ಲರನ್ನೂ ಭೇಟಿ ಮಾಡುತ್ತೇನೆ. ಅವರಿಗೆ ತಿಳಿಸಬೇಕಾದ ಕೆಲವು ಪ್ರಮುಖ ವಿಷಯಗಳಿವೆ. ನಾನು ಅದನ್ನು ಮಾಡುತ್ತೇನೆ" ಎಂದು ಅವರು ಹೇಳಿದರು.