

ಬೆಂಗಳೂರು: ಮೆಟ್ರೋ ನಿರ್ಮಾಣ ಸ್ಥಳದಲ್ಲಿ ವ್ಯಕ್ತಿಯೊಬ್ಬ ಕ್ರೇನ್ನ ಮೇಲ್ಭಾಗಕ್ಕೆ ಹತ್ತಿದ್ದರಿಂದಾಗಿ ಕೆಲಕಾಲ ಆತಂಕ ಸೃಷ್ಟಿಯಾಯಿತು. ಆ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ ಕಾಣುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮಾರತ್ಹಳ್ಳಿ ಬಳಿ ಮೆಟ್ರೋ ನಿರ್ಮಾಣ ಕಾರ್ಯ ನಡೆಯುತ್ತಿರುವಾಗ ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಭಾಗಶಃ ಬಟ್ಟೆ ಧರಿಸಿದ್ದ ವ್ಯಕ್ತಿ ಕ್ರೇನ್ ಹತ್ತಿ ಆಪರೇಟರ್ ಕ್ಯಾಬಿನ್ಗೆ ಪ್ರವೇಶಿಸಿಸದ್ದಾನೆ. ಇದು ಕಾರ್ಮಿಕರಲ್ಲಿ ಭೀತಿ ಉಂಟುಮಾಡಿದೆ.
ಆತನನ್ನು ಗಮನಿಸಿದ ಸಿಬ್ಬಂದಿ ಆತನನ್ನು ಕೆಳಗೆ ಇಳಿಸುವಲ್ಲಿ ಯಶಸ್ವಿಯಾದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆ ವ್ಯಕ್ತಿಯನ್ನು ರಕ್ಷಿಸಿದ ನಂತರ ಕಟ್ಟಿಹಾಕಿ ಥಳಿಸಲಾಗಿದೆ ಎಂಬ ವರದಿಯಾಗಿದ್ದು, ಮೆಟ್ರೋ ಅಧಿಕಾರಿಯೊಬ್ಬರು ಆ ಆರೋಪಗಳನ್ನು ನಿರಾಕರಿಸಿದ್ದಾರೆ. ಆದರೆ, ಸತ್ಯವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಆ ವ್ಯಕ್ತಿ ಮಾನಸಿಕವಾಗಿ ಅಸ್ವಸ್ಥನಂತೆ ಕಾಣುತ್ತಿದ್ದ ಮತ್ತು ಈ ಸಂಬಂಧ ಬಿಎಂಆರ್ಸಿಎಲ್ನಿಂದ ನಮಗೆ ಇನ್ನೂ ಯಾವುದೇ ದೂರು ಬಂದಿಲ್ಲ. ಆದ್ದರಿಂದ, ಯಾವುದೇ ಎಫ್ಐಆರ್ ದಾಖಲಾಗಿಲ್ಲ' ಎಂದು ಅಧಿಕಾರಿ ಹೇಳಿದರು.
ಆ ವ್ಯಕ್ತಿಯನ್ನು ನಂತರ ಆತನ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.