

ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 13 ರಿಂದ ಆರಂಭವಾಗಲಿದ್ದು, ಈ ಸಂಬಂಧ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಮಂಗಳವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಮಂಡಲದ ಉಭಯ ಸದನಗಳ ಮುಂಗಾರು ಅಧಿವೇಶನ ಆಗಸ್ಟ್ 13 ರಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ಆಗಸ್ಟ್ 27 ರವರೆಗೆ ಅಧಿವೇಶನ ನಡೆಯಲಿದೆ.
ಮುಂಗಾರು ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಣೆಯಾಗಿ ಈ ಬಾರಿ ಹೊಸ ಸಚಿವರು ಆಗಮನವಾಗಲಿದೆ. ಸಂಪುಟದಲ್ಲಿ ಶೇಕಡಾ 75 ರಷ್ಟು ಮಂದಿ ಹೊಸಬರು, ಶೇಕಡಾ 25 ರಷ್ಟು ಹಳಬರು ಇರಲಿದ್ದಾರೆ ಎನ್ನಲಾಗಿದೆ.
ಚರ್ಚೆಯಾಗಲಿರುವ ಪ್ರಮುಖ ವಿಷಯಗಳು
ಬಿಡದಿ ಟೌನ್ಶಿಪ್ ಯೋಜನೆ
ಕೆಪಿಎಸ್ಸಿ ನೇಮಕಾತಿ ಹಗರಣ
ಬರಗಾಲ, ಬರ ಪರಿಹಾರ
ಪಂಚ ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಮತ್ತು ಪರಿಷ್ಕರಣೆ
ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆದು ಹಲ್ಲೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ.
ಜಿಬಿಎ, ಸ್ಥಳೀಯ ಸಂಸ್ಥೆಗಳ ಚುನಾವಣೆ.
ಆರ್ಎಸ್ಎಸ್ ನೋಂದಣಿ.
ರಾಮಮಂದಿರ ದೇಣಿಗೆ ಕಳ್ಳತನ.
ನೀಟ್ ಹಗರಣ.