ಕರ್ನಾಟಕದ 18ನೇ ಸಿಎಂ ಆಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್

ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.
DK Shivakumar
ಡಿಕೆ ಶಿವಕುಮಾರ್
Updated on

ಬೆಂಗಳೂರು: ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.

ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಂದ ಪಟಾಕಿ ಸಿಡಿಸುವಿಕೆ ಮತ್ತು ಜೋರಾದ ಹರ್ಷೋದ್ಗಾರಗಳ ನಡುವೆ ಡಿಕೆ ಶಿವಕುಮಾರ್ ಅವರು ಸಂಜೆ 4.15ಕ್ಕೆ ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಭಾರತದ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಪ್ರಮಾಣ ವಚನ ಸ್ವೀಕರಿಸಿದರು ಮತ್ತು ಅಜ್ಜಯ್ಯ ಸ್ವಾಮೀಜಿಯವರ ಛಾಯಾಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಡಿಕೆಶಿ ತಮ್ಮ ಆಧ್ಯಾತ್ಮಿಕ ಗುರು ವೀರಗಂಗಾಧರಾಚಾರ್ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಡಿಕೆ ಶಿವಕುಮಾರ್ ಬೆನ್ನಲ್ಲೇ ಡಾ. ಜಿ ಪರಮೇಶ್ವರ್, ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೋಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯುಟಿ ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್ ಮತ್ತು ಶರಣ ಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.

DK Shivakumar
DK Shivakumar and cabinet swearing-in LIVE updates | ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣವಚನ ಸ್ವೀಕಾರ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com