ಧಾರ್ಮಿಕ ಮುಖಂಡರು, ರಾಜಕೀಯ ನೇತಾರರು, ಸಿನಿಮಾ ತಾರೆಯರು: ಡಿಕೆಶಿ ಪ್ರಮಾಣವಚನ ಸಮಾರಂಭಕ್ಕೆ ಸಾಕ್ಷಿಯಾದ ಸೆಲೆಬ್ರಿಟಿಗಳು!

ನಿರ್ಗಮಿತ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ವೀರಪ್ಪ ಮೊಯ್ಲಿ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಿವಕುಮಾರ್ ಲೋಕಭವನ ಪ್ರವೇಶಿಸಿದ ಕೂಡಲೇ ಎಲ್ಲ ಧರ್ಮಗಳ ಆಧ್ಯಾತ್ಮಿಕ ಮುಖ್ಯಸ್ಥರ ಕಡೆಗೆ ತೆರಳಿ ಆಶೀರ್ವಾದ ಪಡೆದರು.
Former India cricketer Anil Kumble, actor Ragini Dwivedi arrive to attend the swearing-in ceremony.
ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಅನಿಲ್ ಕುಂಬ್ಳೆ ನಟಿ ರಾಗಿಣಿ
Updated on

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಆಡಳಿತವಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಸಾಕ್ಷಿಯಾದರು.

ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ವಿಡಿ ಸತೀಶನ್ ಮತ್ತು ಹಿಮಾಚಲ ಪ್ರದೇಶ ಸಿಎಂ ಸುಕ್ವಿಂದರ್ ಸಿಂಗ್ ಸುಖು ಉಪಸ್ಥಿತರಿದ್ದರು. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಜರಿದ್ದರು.

ಖರ್ಗೆ ಮತ್ತು ರಾಹುಲ್ ಅವರಲ್ಲದೆ, ರಾಜ್ಯಸಭಾ ಸದಸ್ಯ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಕರ್ನಾಟಕ ಉಸ್ತುವಾರಿ) ರಣದೀಪ್ ಸಿಂಗ್ ಸುರ್ಜೆವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಮತ್ತು ಆಲಪ್ಪುಳ ಲೋಕಸಭಾ ಸದಸ್ಯ ಕೆಸಿ ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖರು ಭಾಗವಹಿಸಿದ್ದರು.

ನಿರ್ಗಮಿತ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ವೀರಪ್ಪ ಮೊಯ್ಲಿ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಿವಕುಮಾರ್ ಲೋಕಭವನ ಪ್ರವೇಶಿಸಿದ ಕೂಡಲೇ ಎಲ್ಲ ಧರ್ಮಗಳ ಆಧ್ಯಾತ್ಮಿಕ ಮುಖ್ಯಸ್ಥರ ಕಡೆಗೆ ತೆರಳಿ ಆಶೀರ್ವಾದ ಪಡೆದರು.

Former India cricketer Anil Kumble, actor Ragini Dwivedi arrive to attend the swearing-in ceremony.
ಪಕ್ಷ ವಿರೋಧಿ ಚಟುವಟಿಕೆಗೆ ಬೆಲೆ ತೆತ್ತ ಜಮೀರ್: ಡಿಕೆ ಶಿವಕುಮಾರ್ ಸಚಿವ ಸಂಪುಟದಿಂದ ಸಿದ್ದು ಆಪ್ತ ಹೊರಕ್ಕೆ!

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮಿಗಳು, ಗೌರಿಗದ್ದೆ ಅವಧೂತ ವಿನಯ್‌ ಗುರೂಜಿ, ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗಿ ಮಹಾಸ್ವಾಮಿಗಳು, ಬೆಂಗಳೂರು ಆರ್ಚ್‌ಬಿಷಪ್ ಪೀಟರ್ ಮಚಾಡೊ, ಹಜರತ್‌ಬುಡಗಿ ದರ್ವಾಜದ ಪ್ರತಿನಿಧಿಗಳು ಸೇರಿದಂತೆ ಪ್ರಮುಖರು ಇದ್ದರು.

ಶಿವರಾಜ್ ಕುಮಾರ್, ಮಾಜಿ ಸಂಸದೆ ರಮ್ಯಾ, ರಮೇಶ್ ಅರವಿಂದ್, ಧನಂಜಯ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ, ರಾಗಿಣಿ ದ್ವಿವೇದಿ, ಸಂಗೀತ ನಿರ್ದೇಶಕರಾದ ಅರ್ಜುನ್ ಜನ್ಯ, ಗುರುಕಿರಣ್ ಸೇರಿದಂತೆ ಕನ್ನಡ ಚಿತ್ರರಂಗದ ತಾರೆಯರು ಭಾಗವಹಿಸಿದ್ದರು. ಪೌರಕಾರ್ಮಿಕರು, ರೈತ ಮುಖಂಡರು, ವಿದ್ಯಾರ್ಥಿಗಳು ಹಾಗೂ ಕನ್ನಡಪರ ಹೋರಾಟಗಾರರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ, ಅವರ ಪತ್ನಿ ಮತ್ತು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ತೆಲಂಗಾಣ ಸಚಿವ ಸಂಪುಟದಲ್ಲಿ ಸಚಿವರಾಗಿರುವ ಭಾರತದ ಮಾಜಿ ಕ್ರಿಕೆಟಿಗರಾದ ಮೊಹಮ್ಮದ್ ಅಜರುದ್ದೀನ್ ಮತ್ತು ಅನಿಲ್ ಕುಂಬ್ಳೆ ಸೇರಿದಂತೆ ಇತರ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com