

ಬೆಂಗಳೂರು: ಕೆಂಪೇಗೌಡ ಜಯಂತಿ ಅಂಗವಾಗಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ ಜೂನ್ 27 ರಂದು ಕೆಂಪೇಗೌಡ ದಿನಾಚರಣೆಯನ್ನು ಬಿಡಿಎ ವತಿಯಿಂದ ಆಚರಿಸುತ್ತಿದ್ದು, 15 ಲಕ್ಷ ಸಸಿ ನೆಡಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ವಿಶ್ವ ಪರಿಸರ ದಿನವನ್ನು, ಸಸಿ ನೆಡುವ ಅಭಿಯಾನ ಮತ್ತು ಪರಿಸರ ಜಾಗೃತಿ ಮತ್ತು ರಕ್ಷಣೆಗೆ ಕರೆ ನೀಡುವ ಮೂಲಕ ಆಚರಿಸಲಾಯಿತು. ವಿಧಾನಸೌಧದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆಯ ಬಳಿ ಸಸಿ ನೆಟ್ಟ ನಂತರ ಮಾತನಾಡಿದ ಅವರು, ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ ಗಿಡಗಳನ್ನು ಬೆಳೆಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದರು.
ವಿಶ್ವ ಪರಿಸರದ ದಿನದ ಅಂಗವಾಗಿ ಇಂದು ವಿಮಾನ ನಿಲ್ದಾಣದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರೊಂದಿಗೆ ಕೂಡಾ ಸಸಿ ನೆಡಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ಹೈಕೋರ್ಟ್, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ಪಶುವೈದ್ಯಕೀಯ ಮಂಡಳಿಯು ರಾಜ್ಯಾದ್ಯಂತ ಐದು ಕೋಟಿ ಸಸಿಗಳನ್ನು ನೆಡುವ ಮತ್ತು ನೀರಿನ ಮೂಲಗಳನ್ನು ಪುನರುಜ್ಜೀವನಗೊಳಿಸುವ ಗುರಿ ಹೊಂದಿರುವ ದೊಡ್ಡ ಪ್ರಮಾಣದ ಪರಿಸರ ಯೋಜನೆ ಪ್ರಾರಂಭಿಸಿದೆ.
Advertisement