ಬೆಳಗಾವಿ: ಈಜಲು ಹಳ್ಳಕ್ಕೆ ಇಳಿದಿದ್ದ ಅಣ್ಣ-ತಮ್ಮ ಇಬ್ಬರೂ ನೀರುಪಾಲು; ಪೋಷಕರ ಆಕ್ರಂದನ

ಮೃತ ಬಾಲಕರನ್ನು ಧರ್ಮಟ್ಟಿ ಗ್ರಾಮದ ಸಾಗರ್ ಮಾದರ(15), ಪ್ರವೀಣ್ ಮಾದರ(13) ಎಂದು ಗುರುತಿಸಲಾಗಿದ್ದು, ಇಬ್ಬರೂ ಹಳ್ಳದಲ್ಲಿ ಈಜಲು ತೆರಳಿದ್ದರು.
2 brothers drown in village stream in Belagavi district
ಸಾಗರ್ ಮಾದರ(15), ಪ್ರವೀಣ್ ಮಾದರ(13)
Updated on

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಸೋಮವಾರ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಈಜಲು ಹಳ್ಳಕ್ಕೆ ಇಳಿದಿದ್ದ ಅಣ್ಣ- ತಮ್ಮ ಇಬ್ಬರೂ ನೀರುಪಾಲಾಗಿದ್ದಾರೆ.

ಮೃತ ಬಾಲಕರನ್ನು ಧರ್ಮಟ್ಟಿ ಗ್ರಾಮದ ಸಾಗರ್ ಮಾದರ(15), ಪ್ರವೀಣ್ ಮಾದರ(13) ಎಂದು ಗುರುತಿಸಲಾಗಿದ್ದು, ಇಬ್ಬರೂ ಹಳ್ಳದಲ್ಲಿ ಈಜಲು ತೆರಳಿದ್ದರು. ಈ ವೇಳೆ ನೀರಿಗಿಳಿದಾಗ ಪ್ರವೀಣ್ ಮುಳುಗಿದ್ದಾನೆ. ಇದನ್ನು ಗಮನಿಸಿ ಆತನ ರಕ್ಷಣೆಗೆ ಸಾಗರ್ ತೆರಳಿದ್ದು, ಆತನೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಮೃತದೇಹವನ್ನು ಸ್ಥಳೀಯರು ಹಾಗೂ ಪೊಲೀಸರು ನೀರಿನಿಂದ ಹೊರತೆಗೆದಿದ್ದಾರೆ. ಇಬ್ಬರು ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

2 brothers drown in village stream in Belagavi district
ಬೆಳಗಾವಿ: 4ನೇ ಮಗು ಕೂಡ ಹೆಣ್ಣಾಗಿದ್ದಕ್ಕೆ 3 ದಿನದ ಹಸುಗೂಸನ್ನು ಕತ್ತು ಹಿಸುಕಿ ಕೊಂದ ಪಾಪಿ ತಾಯಿ!

ಈ ಸಂಬಂಧ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com