ಅಭಿವೃದ್ಧಿ ನಿಧಿ ಹಂಚಿಕೆಯಲ್ಲಿ ತಾರತಮ್ಯ ಮಾಡಬೇಡಿ: ಸಿಎಂ ಡಿಕೆ ಶಿವಕುಮಾರ್ ಗೆ ಜೆಡಿಎಸ್ ಶಾಸಕರ ಮನವಿ

ಅಭಿವೃದ್ಧಿ ನಿಧಿ ಹಂಚಿಕೆ ಮಾಡುವಾಗ ನಮ್ಮ ಪಕ್ಷದ ಶಾಸಕರ ವಿರುದ್ಧ ತಾರತಮ್ಯ ಮಾಡಬೇಡಿ ಎಂದು ನಾವು ಸಿಎಂ ಅವರನ್ನು ಒತ್ತಾಯಿಸಿದ್ದೇವೆ.
DK Shivakumar
ಡಿಕೆ ಶಿವಕುಮಾರ್
Updated on

ಬೆಂಗಳೂರು: ಅಭಿವೃದ್ಧಿ ನಿಧಿ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ನಡೆದುಕೊಳ್ಳಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜೆಡಿಎಸ್ ಶಾಸಕರ ನಿಯೋಗ ಮನವಿ ಮಾಡಿದೆ.

ಕನಕಪುರದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಶಿವಕುಮಾರ್, ಜೆಡಿಎಸ್ ಕಾರ್ಯಕರ್ತರಿಗೆ ಮುಕ್ತ ಆಹ್ವಾನ ನೀಡಿದ ಒಂದು ದಿನದ ನಂತರ ಸಿಎಂ ಅವರನ್ನು ಭೇಟಿ ಮಾಡಿದ ನಿಯೋಗ ಮನವಿ ಸಲ್ಲಿಸಿದೆ. ನಾನು ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ಸಿಎಂ ಅಲ್ಲ. ನನ್ನ ಬಾಗಿಲುಗಳು ಜೆಡಿಎಸ್ ಸದಸ್ಯರಿಗೂ ತೆರೆದಿರುತ್ತವೆ ಎಂದು ಶಿವಕುಮಾರ್ ಹೇಳಿದರು.

ಶಾಸಕ ಸಿ.ಬಿ. ಸುರೇಶ್ ಬಾಬು ನೇತೃತ್ವದ ಜೆಡಿ(ಎಸ್) ನಿಯೋಗದಲ್ಲಿ ಕರೆಮ್ಮ ನಾಯಕ್, ಎ. ಮಂಜು, ಜಿ.ಟಿ. ಹರೀಶ್ ಗೌಡ, ಸ್ವರೂಪ್ ಪ್ರಕಾಶ್, ಸಿ.ಎನ್. ಬಾಲಕೃಷ್ಣ, ವೆಂಕಟಶಿವ ರೆಡ್ಡಿ ಮತ್ತು ನೇಮಿರಾಜ್ ನಾಯಕ್ ಇದ್ದರು.

ಅಭಿವೃದ್ಧಿ ನಿಧಿ ಹಂಚಿಕೆ ಮಾಡುವಾಗ ನಮ್ಮ ಪಕ್ಷದ ಶಾಸಕರ ವಿರುದ್ಧ ತಾರತಮ್ಯ ಮಾಡಬೇಡಿ ಎಂದು ನಾವು ಸಿಎಂ ಅವರನ್ನು ಒತ್ತಾಯಿಸಿದ್ದೇವೆ. ಆದರೆ ಈ ರೀತಿ ಆಗುವುದಿಲ್ಲ ಎಂದು ಸಿಎಂ ನಮಗೆ ಭರವಸೆ ನೀಡಿದ್ದಾರೆ ಎಂದು ಸುರೇಶ್ ಬಾಬು ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

DK Shivakumar
ಹಿರಿಯರ ಅನುಭವ, ಮಾರ್ಗದರ್ಶನ ಬೇಕು: ಸಮಯ ಕೊಟ್ಟರೆ ಕುಮಾರಸ್ವಾಮಿ ಭೇಟಿ ಮಾಡುವೆ; ಡಿ.ಕೆ ಶಿವಕುಮಾರ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com