ಸಿಎಂಗೆ ಮುಖ್ಯ ಸಲಹೆಗಾರರಾಗಿ ಸುನೀಲ್‌ ಕನುಗೋಳು ನೇಮಕ: ಸಂಪುಟ ದರ್ಜೆ ಸಚಿವರ ಸ್ಥಾನಮಾನ

ಬಳ್ಳಾರಿ ಜಿಲ್ಲೆಯ ಸುನೀಲ್‌ ಕನುಗೋಳು ಅವರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ತಮ್ಮ ಸಲಹೆಗಾರರಾಗಿಸಿ ಸಿಎಂ ನೇಮಕ ಮಾಡಿದ್ದಾರೆ
Sunil Kanugolu
ಸುನೀಲ್‌ ಕನುಗೋಳು
Updated on

ಬೆಂಗಳೂರು: ಕಾಂಗ್ರೆಸ್‌ನ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಸುನೀಲ್‌ ಕನುಗೋಳು ಅವರನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಮುಖ್ಯ ಸಲಹೆಗಾರರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಬಳ್ಳಾರಿ ಜಿಲ್ಲೆಯ ಸುನೀಲ್‌ ಕನುಗೋಳು ಅವರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ತಮ್ಮ ಸಲಹೆಗಾರರಾಗಿಸಿ ಸಿಎಂ ನೇಮಕ ಮಾಡಿದ್ದಾರೆ.‌ ಈ ಹಿಂದೆ ಸಿಎಂ ಸಿದ್ದರಾಮಯ್ಯನವರು ಸುನೀಲ್‌ ಕನುಗೋಳು ಅವರನ್ನು ಮುಖ್ಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದರು

ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದ ಪೇಸಿಎಂ ಅಭಿಯಾನ, ಉಚಿತ ಗ್ಯಾರಂಟಿಗಳ ಹಿಂದಿನ ಸೂತ್ರಧಾರಿಯೇ ಸುನೀಲ್ ಕನುಗೋಳು ಎನ್ನಲಾಗಿದೆ.

ಪಕ್ಷ ಗೆಲ್ಲುವಲ್ಲಿ ತೆರೆ ಹಿಂದಿನ ತಂತ್ರಗಾರಿಕೆಯನ್ನು ಹೆಣೆದಿದ್ದರು. ಈಗ ಆಡಳಿತದಲ್ಲೂ ಸಿಎಂಗೆ ಮುಖ್ಯ ಸಲಹೆಗಾರರಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ

Sunil Kanugolu
'ನಿಮಗೂ ಬಾಗಿಲು ತೆರೆದಿದೆ, ಅದರ ಬಗ್ಗೆ ಯೋಚಿಸಿ': ಜೆಡಿಎಸ್ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂದೇಶ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com