'ನಿಮ್ಮಪ್ಪನಿಂದಲೇ ಏನು ಮಾಡಲು ಆಗಿಲ್ಲ, ನಿಮ್ಮಿಂದ ಆಗುತ್ತಾ? ಗೂಂಡಾ ರೀತಿಯಲ್ಲ, ಹೋಂ ಮಿನಿಸ್ಟರ್ ರೀತಿ ವರ್ತಿಸಿ'

ನೀವು ಸರ್ವಾಧಿಕಾರಿ ಅಲ್ಲ. ಇದು ನಿಮ್ಮ ಪಕ್ಷದ ಕೊನೆ ದಿನಗಳು. ನಿಮ್ಮ ಅಪ್ಪನ ಆಣೆ ಕಾಂಗ್ರೆಸ್ ಮುಂದೆ ಅಧಿಕಾರಕ್ಕೆ ಬರಲ್ಲ. ಆರ್‌ಎಸ್‌ಎಸ್ ರಾಷ್ಟ್ರದ ಕೆಲಸ, ವ್ಯಕ್ತಿಗೆ ಸಂಸ್ಕಾರ ಕೊಡುವ ಕೆಲಸ ಮಾಡುತ್ತಿದೆ.
Minister Priyank Kharge
ಸಚಿವ ಪ್ರಿಯಾಂಕ್ ಖರ್ಗೆ
Updated on

ಬೆಂಗಳೂರು: ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡಲು ಆಗಿಲ್ಲ, ನಿಮ್ಮಿಂದ ಆಗುತ್ತಾ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ.

ಆರ್‌ಎಸ್‌ಎಸ್ ಅವರು ನೋಂದಣಿ ಮಾಡಿಸಲು ರೆಡಿಯಾಗಿ ಎಂಬ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನೆಹರು ಪ್ರಧಾನಿ ಆಗಿದ್ದರು, ಅವರು ಆರ್‌ಎಸ್‌ಎಸ್ ವಿರೋಧ ಮಾಡಿದ್ರು. ಆರ್‌ಎಸ್‌ಎಸ್ ಇನ್ನು ಇದೆ. ನೆಹರು ಇಲ್ಲ. ಇಂದಿರಾಗಾಂಧಿ ತುರ್ತುಸ್ಥಿತಿ ಹೇರಿದ್ರು. ಆರ್‌ಎಸ್‌ಎಸ್ ಬ್ಯಾನ್ ಮಾಡಿದ್ರು. ಇಂದಿರಾಗಾಂಧಿ ಇಲ್ಲ. ಆರ್‌ಎಸ್‌ಎಸ್ ಇನ್ನು ಇದೆ. ಪ್ರಿಯಾಂಕ್ ಅವರೇ ನೀವು ನಿನ್ನೆ ಮೊನ್ನೆ ಹೋಂ ಮಿನಿಸ್ಟರ್ ಆಗಿರೋದು. ನಿಮ್ಮ ಅಪ್ಪ ನಿಮಗಿಂತ ಮುಂಚೆ ಗೃಹ ಸಚಿವರು ಆಗಿದ್ರು. ನಿಮ್ಮಪ್ಪನಿಂದ ಏನು ಮಾಡಲು ಆಗಿಲ್ಲ ಇನ್ನು ನಿಮ್ಮಿಂದ ಆಗುತ್ತಾ ಎಂದು ಕಿಡಿಕಾರಿದರು.

ನೀವು ಸರ್ವಾಧಿಕಾರಿ ಅಲ್ಲ. ಇದು ನಿಮ್ಮ ಪಕ್ಷದ ಕೊನೆ ದಿನಗಳು. ನಿಮ್ಮ ಅಪ್ಪನ ಆಣೆ ಕಾಂಗ್ರೆಸ್ ಮುಂದೆ ಅಧಿಕಾರಕ್ಕೆ ಬರಲ್ಲ. ಆರ್‌ಎಸ್‌ಎಸ್ ರಾಷ್ಟ್ರದ ಕೆಲಸ, ವ್ಯಕ್ತಿಗೆ ಸಂಸ್ಕಾರ ಕೊಡುವ ಕೆಲಸ ಮಾಡುತ್ತಿದೆ. ನೋಂದಣಿ ಮಾಡೋಕೆ ಅದು ಸಂಘ ಅಲ್ಲ. ಸಮಾಜವನ್ನ ಸಂಘಟಿಸುವ ಸಂಘಟನೆ ಅದು. ನಿಮಗೆ ಗೃಹ ಸಚಿವರಾಗಿ ಬೇರೆ ಕೆಲಸ ಇದೆ. ಅದನ್ನ ನೋಡಿ ಎಂದಿದಿದ್ದಾರೆ.

Minister Priyank Kharge
Watch | ಆರ್‌ಎಸ್‌ಎಸ್ ನೋಂದಣಿಗಾಗಿ ದಾಖಲೆ ಸಿದ್ಧವಾಗಿಡಲು ಹೇಳಿ: ಪ್ರಿಯಾಂಕ್ ಖರ್ಗೆ

ನೀವು ಹೋಂ ಮಿನಿಸ್ಟರ್, ಹೋಂ ಮಿನಿಸ್ಟರ್ ರೀತಿ ವರ್ತನೆ ಮಾಡಿ, ಗೂಂಡಾ ರೀತಿ ವರ್ತನೆ ಮಾಡಬೇಡಿ. ಅಧಿಕಾರ ಶಾಶ್ವತ ಅಲ್ಲ. ಅಧಿಕಾರದಲ್ಲಿ ಮೆರೆದವರಿಗೆ ಇಂದು ಪಶ್ಚಿಮ ಬಂಗಾಳ ಅಟ್ಟಾಡಿಸಿ ಹೊಡೆಯುತ್ತಿದ್ದಾರೆ. ಆ ಭಯದಿಂದ ಎಚ್ಚರಿಕೆ ವಹಿಸಿ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com