ಮೇಜರ್ ಸರ್ಜರಿ: ಹಿರಿಯ ಅಧಿಕಾರಿಗಳ ವರ್ಗ, ಕಟಾರಿಯಾಗೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆ ಹೆಚ್ಚುವರಿ ಹೊಣೆ!

ವಸತಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮೋಹನ್ ರಾಜ್ KP (Mohan Raj K P) ಅವರನ್ನು ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಜೊತೆಗೆ ವಸತಿ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಯನ್ನೂ ಅವರಿಗೆ ನೀಡಲಾಗಿದೆ.
Karnataka reshuffles six senior officers
ಅಧಿಕಾರಿಗಳ ವರ್ಗಾವಣೆ
Updated on

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (D. K. Shivakumar) ನೇತೃತ್ವದ ಹೊಸ ಸಚಿವ ಸಂಪುಟ ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದ ಉನ್ನತ ಮಟ್ಟದ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಮುಂದುವರಿದಿದ್ದು, ಕರ್ನಾಟಕ ಸರ್ಕಾರ ಬುಧವಾರ ಆರು ಹಿರಿಯ ಅಧಿಕಾರಿಗಳ ಜವಾಬ್ದಾರಿಗಳಲ್ಲಿ ಬದಲಾವಣೆ ಮಾಡಿದೆ.

ಸರ್ಕಾರ ಹೊರಡಿಸಿದ ಅಧಿಕೃತ ಆದೇಶದ ಪ್ರಕಾರ, ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ರಾಜೇಂದ್ರ ಕುಮಾರ್ ಕಟಾರಿಯಾ (Rajender Kumar Kataria) ಅವರಿಗೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ACS) ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಲಾಗಿದೆ.

ಅದೇ ರೀತಿ, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಅಂಜುಂ ಫರ್ವೇಜ್ (Anjum Parwez) ಅವರಿಗೆ ಲೋಕೋಪಯೋಗಿ ಇಲಾಖೆ (PWD) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಸಮಕಾಲೀನ (Concurrent) ಜವಾಬ್ದಾರಿಯನ್ನು ವಹಿಸಲಾಗಿದೆ.

Karnataka reshuffles six senior officers
Operation Grihalakshmi: ರಾಜ್ಯಾದ್ಯಂತ 4.30 ಲಕ್ಷ 'ಗೃಹಲಕ್ಷ್ಮಿ' ಫಲಾನುಭವಿಗಳ ಹೆಸರು ಡಿಲೀಟ್

ಇತರೆ ಪ್ರಮುಖ ಬದಲಾವಣೆಗಳು

ವಸತಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮೋಹನ್ ರಾಜ್ KP (Mohan Raj K P) ಅವರನ್ನು ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಜೊತೆಗೆ ವಸತಿ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಯನ್ನೂ ಅವರಿಗೆ ನೀಡಲಾಗಿದೆ.

ಇತ್ತ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರಾಗಿರುವ ಸೆಲ್ವಮಣಿ ಆರ್ (Selvamani R) ಅವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವ್ಯವಸ್ಥಾಪಕ ನಿರ್ದೇಶಕ ಹಾಗೂ ಸ್ವಚ್ಛ ಭಾರತ್ ಮಿಷನ್ (ನಗರ) ರಾಜ್ಯ ಮಿಷನ್ ನಿರ್ದೇಶಕರ ಹುದ್ದೆಗಳ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.

ಈವರೆಗೆ ಹುದ್ದೆ ನಿರೀಕ್ಷೆಯಲ್ಲಿದ್ದ ಮಹೇಶ್ ಎಂ (Mahesh M) ಅವರನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (KUWSDB) ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಸಹಕಾರ ಸಂಘಗಳ ನಿಬಂಧಕರಾಗಿರುವ ವೆಂಕಟೇಶ್ ಎಂವಿ (Venkatesh M V) ಅವರಿಗೆ ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಅಂಕಿಅಂಶ ಇಲಾಖೆ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.

Karnataka reshuffles six senior officers
'ಕನ್ನಡಿಗರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ': ಕನ್ನಡದಲ್ಲೇ ಕೇರಳ DIG ಯತೀಶ್ ಚಂದ್ರ ಮನವಿ, Video

ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸರಣಿ ಬದಲಾವಣೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 28ರಂದು ರಾಜೀನಾಮೆ ನೀಡಿದ ಬಳಿಕ, ಜೂನ್ 3ರಂದು ಡಿ.ಕೆ. ಶಿವಕುಮಾರ್ ಅವರು 13 ಸಚಿವರೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆಡಳಿತ ಯಂತ್ರದಲ್ಲಿ ವ್ಯಾಪಕ ಬದಲಾವಣೆಗಳು ನಡೆಯುತ್ತಿದ್ದು, ಹಿರಿಯ ಐಎಎಸ್ ಅಧಿಕಾರಿಗಳ ಜವಾಬ್ದಾರಿಗಳ ಮರುಹಂಚಿಕೆ ಪ್ರಕ್ರಿಯೆ ಮುಂದುವರಿದಿದೆ. ಸರ್ಕಾರದ ಆದ್ಯತೆಗಳಿಗೆ ಅನುಗುಣವಾಗಿ ಪ್ರಮುಖ ಇಲಾಖೆಗಳ ಆಡಳಿತವನ್ನು ಪುನರ್‌ವ್ಯವಸ್ಥಿತಗೊಳಿಸುವ ಉದ್ದೇಶದಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com