ಜೂ. 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ!

ಮುಖ್ಯಮಂತ್ರಿಗಳು Z+ ಶ್ರೇಣಿಯ ಭದ್ರತಾ ವ್ಯವಸ್ಥೆ ಹೊಂದಿರುವುದರಿಂದ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲು ಕರ್ನಾಟಕ ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳನ್ನು ಕೋರಲಾಗಿದೆ.
cm VIJAY
ಸಿಎಂ ವಿಜಯ್
Updated on

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜೂನ್ 12 ರಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12.30 ಕ್ಕೆ ವಿಶೇಷ ವಿಮಾನದ ಮೂಲಕ ನವದೆಹಲಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ನಂತರ ಅವರು ರಸ್ತೆ ಮೂಲಕ ಬೈಂದೂರು ತಾಲ್ಲೂಕಿನ ಕೊಲ್ಲೂರಿಗೆ ದೇವಾಲಯದ ದರ್ಶನ ಪಡೆಯಲಿದ್ದಾರೆ. ಭೇಟಿಯ ನಂತರ, ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಹಿಂತಿರುಗಿ ವಿಶೇಷ ವಿಮಾನದ ಮೂಲಕ ಚೆನ್ನೈಗೆ ತೆರಳಲಿದ್ದಾರೆ ಎಂದು ತಮಿಳುನಾಡು CID ಭದ್ರತಾ ಶಾಖೆಯ ಅಧಿಕೃತ ಮಾಹಿತಿಗಳು ತಿಳಿಸಿವೆ.

ಮುಖ್ಯಮಂತ್ರಿಗಳು Z+ ಶ್ರೇಣಿಯ ಭದ್ರತಾ ವ್ಯವಸ್ಥೆ ಹೊಂದಿರುವುದರಿಂದ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲು ಕರ್ನಾಟಕ ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳನ್ನು ಕೋರಲಾಗಿದೆ. ಜನಸಂದಣಿಯನ್ನು ನಿರ್ವಹಿಸಲು, ಸಂಚಾರವನ್ನು ಸುಗಮಗೊಳಿಸಲು ಮಾರ್ಗದಲ್ಲಿ ಸಾಕಷ್ಟು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ.

cm VIJAY
'ತ್ರಿಶಾರನ್ನು ಮನೆಯಿಂದ ಹೊರಗೆ ಬಿಡಬಾರದು' ಹೇಳಿಕೆ: ತಮಿಳುನಾಡು ಸಿಎಂ ವಿಜಯ್ ಭೇಟಿಯಾದ ಪಾರ್ಥಿಬನ್!

ತಮಿಳುನಾಡು ಮುಖ್ಯಮಂತ್ರಿ ಸಂಚರಿಸುವ ಮಾರ್ಗ ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ ಮತ್ತು ಸೌಪರ್ಣಿಕಾ ನದಿ ಜಲಾನಯನ ಪ್ರದೇಶದ ಬಳಿಯ ಅರಣ್ಯ ಮತ್ತು ಗುಡ್ಡಗಾಡು ಪ್ರದೇಶದ ಮೂಲಕ ಹಾದುಹೋಗುತ್ತದೆ. ಅರಣ್ಯ ಇಲಾಖೆ ಸಿಬ್ಬಂದಿಗೆ ಈ ಮಾರ್ಗದಲ್ಲಿ ಅನುಮಾನಾಸ್ಪದ ಚಟುವಟಿಕೆ ಮತ್ತು ವನ್ಯಜೀವಿಗಳ ಚಲನವಲನಗಳನ್ನು ಮೇಲ್ವಿಚಾರಣೆ ಮಾಡಲು ಕೋರಲಾಗಿದೆ.

ವಿಮಾನ ನಿಲ್ದಾಣ, ದೇವಾಲಯದ ಆವರಣ ಮತ್ತು ಪ್ರಯಾಣ ಮಾರ್ಗದಲ್ಲಿ ಕಟ್ಟುನಿಟ್ಟಾದ ಪ್ರವೇಶ ನಿಯಂತ್ರಣ ಮತ್ತು ವಿಧ್ವಂಸಕ ಕೃತ್ಯಗಳ ವಿರುದ್ಧ ತಪಾಸಣೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com