

ತುಮಕೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಯಾವುದೇ ರೀತಿಯಾದ ಕಂಟಕವಿಲ್ಲ ಎಂದು ನೊಣವಿನಕೆರೆ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಭವಿಷ್ಯ ನೀಡಿದ್ದಾರೆ.
ಕಾಂಗ್ರೆಸ್ ಮುಖಂಡರೊಬ್ಬರ ಮನೆಗೆ ಪಾದಪೂಜೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸ್ವಾಮೀಜಿ ಈ ಬಗ್ಗೆ ಮಾತನಾಡಿದ್ದಾರೆ. ಸಾಕಷ್ಟು ಪ್ರಯತ್ನದ ಬಳಿಕ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿರುವ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಇನ್ನು ಮುಂದೆ ಯಾವುದೇ ಕಂಟಕ ಇಲ್ಲ ಎಂದು ತುಮಕೂರಿನ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ಅಭಯ ನೀಡಿದ್ದಾರೆ.
ಡಿಕೆ ಶಿವಕುಮಾರ್ ಗುರುವಿನ ಆಶೀರ್ವಾದ ಪಡೆದಿದ್ದು, ನಿರಂತರವಾಗಿ ಶ್ರೀಮಠದ ಮಗನಾಗಿ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಗುರುವಿನ ಆಶೀರ್ವಾದ ಅವರಿಗೆ ರಕ್ಷಾಕವಚವಾಗಿದೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ಗೆ ಈಗ ಯಾವುದೇ ರೀತಿಯ ಕಂಟಕಗಳಿಲ್ಲ, ಅವರು ಸಂಪೂರ್ಣವಾಗಿ ಗುರುವಿನ ಆಶೀರ್ವಾದದ ಅಡಿಯಲ್ಲಿ ಇದ್ದಾರೆ.
ಆದ್ದರಿಂದ ಅವರಿಗೆ ಯಾವುದೇ ತೊಂದರೆ ಬಂದರೂ ಅದು ನಿವಾರಣೆ ಆಗುತ್ತೇ ಎಂಬ ಮಾತುಗಳ ಮೂಲಕ ಅಜ್ಜಯ್ಯ ಡಿಕೆಶಿಗೆ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದಾರೆ. ರಾಜಕೀಯ ಜೀವನದಲ್ಲಿ ಏರಿಳಿತಗಳು ಸಹಜ, ಆದರೆ ಗುರುವಿನ ಆಶೀರ್ವಾದವಿದ್ದರೆ ಎಲ್ಲ ಅಡೆತಡೆಗಳು ದೂರವಾಗುತ್ತವೆ ಎಂಬ ಸಂದೇಶವನ್ನು ನೀಡಿದ್ದಾರೆ.
Advertisement